
ಜಮ್ಮು (ಜಮ್ಮು – ಕಾಶ್ಮೀರ) – ಪಾಕಿಸ್ತಾನದ ವಶದಲ್ಲಿರುವ ಜಮ್ಮು ಕಾಶ್ಮೀರ ಭಾಗದ ಜನರು ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿಗೆ ಬಲಿಯಾಗುತ್ತಿದ್ದಾರೆ. ಅವರಿಗೆ ನ್ಯಾಯ ಸಿಗಬೇಕು. ಅವರು ಭಾರತದತ್ತ ಆಸೆಯ ದೃಷ್ಟಿಯಿಂದ ನೋಡುತ್ತಿದ್ದಾರೆ. ಅವರಿಗೆ ಸ್ವಾತಂತ್ರ್ಯ ಎಂದು ? ಎಂಬ ಪ್ರಶ್ನೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಚಿವ ದತ್ತಾತ್ರೇಯ ಹೊಸಬಾಳೆ ಇವರು ಕೇಳಿದರು. ಅವರು ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
J&K | Since 1947, Pakistan has made every attempt to propagate terrorism, separatism & war in J&K. Our army, police forces fought against it. I thank people of land who fought alongside them. Maharaja Hari Singh, acceded J&K to India: Dattatreya Hosabale, RSS Gen Sec (24.07) pic.twitter.com/7qsDlTms5u
— ANI (@ANI) July 25, 2022
ಅವರು ಮಾತು ಮುಂದುವರೆಸಿ, ಪಾಕಿಸ್ತಾನವು ೧೯೪೭ರಿಂದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದನೆ, ಪ್ರತ್ಯೇಕತೆ ಮತ್ತು ಯುದ್ಧ ಇವುಗಳಿಗೆ ಪ್ರೋತ್ಸಾಹ ನೀಡುತ್ತಿದೆ. ನಮ್ಮ ಸೈನ್ಯ ಮತ್ತು ಪೊಲೀಸ್ ಕಳೆದ ಅನೇಕ ವರ್ಷಗಳಿಂದ ಇದರ ವಿರುದ್ಧ ಹೋರಾಡುತ್ತಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ಜನರು ಭಾರತೀಯ ಸೈನ್ಯೆಯೊಂದಿಗೆ ಸೇರಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿಗಳ ವಿರುದ್ಧ ಹೋರಾಡುತ್ತಿದ್ದಾರೆ. ನಾನು ಅವರನ್ನು ಗೌರವಿಸುತ್ತೇನೆ.
ಶಿವಶಂಕರನು ಭಾರತದಲ್ಲಿರುವಾಗ ಮಾತೆ ಶಾರದೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹೇಗಿರಲು ಸಾಧ್ಯ ? – ರಕ್ಷಣಾ ಸಚಿವರಾದ ರಾಜನಾಥ ಸಿಂಹ

ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಜಮ್ಮುವಿನ ಗುಲ್ಶನ್ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆ ಸಮಯದಲ್ಲಿ ಕಾರ್ಗಿಲ್ ಯುದ್ಧದಲ್ಲಿ ವೀರಗತಿ ಪಡೆದಿರುವ ಸೈನಿಕರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು. ಆ ಸಮಯದಲ್ಲಿ ರಕ್ಷಣಾ ಸಚಿವರಾದ ರಾಜನಾಥ ಸಿಂಹ ಇವರು ಶಿವರೂಪ ಬಾಬಾ ಅಮರನಾಥ ನಮ್ಮ ಹತ್ತಿರ ಮತ್ತು ತಾಯಿ ಶಾರದೆ ಶಕ್ತಿ ಸ್ವರೂಪಿಣಿ ನಿಯಂತ್ರಣ ರೇಖೆಯ ಆಚೆಗೆ (ಪಾಕ್ ಆಕ್ರಮಿತ ಕಾಶ್ಮೀರದಲ್ಲಿ) ಹೇಗೆ ಇರಲು ಸಾಧ್ಯ ? ಎಂಬ ವಿಚಾರ ಮಂಡಿಸಿದರು.
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC