ರಕ್ಷಾ (ರಾಖಿ) ಬಂಧನ (ಆಗಸ್ಟ್ ೧೧)

ಇತಿಹಾಸ

ಅ. ‘ಪಾತಾಳದಲ್ಲಿನ ಬಲಿರಾಜನ ಕೈಗೆ ಲಕ್ಷ್ಮೀಯು ರಾಖಿಯನ್ನು ಕಟ್ಟಿ ಅವನನ್ನು ತನ್ನ ಸಹೋದರನನ್ನಾಗಿ ಮಾಡಿಕೊಂಡಳು ಮತ್ತು ನಾರಾಯಣನನ್ನು ಮುಕ್ತಗೊಳಿಸಿದಳು. ಆದಿನ ಶ್ರಾವಣ ಹುಣ್ಣಿಮೆ ಇತ್ತು.

ಆ. ಭವಿಷ್ಯ ಪುರಾಣದಲ್ಲಿ ಹೇಳಿರುವಂತೆ ರಕ್ಷಾಬಂಧನವು ಮೂಲತಃ ರಾಜರಿಗಾಗಿತ್ತು. ರಾಖಿಯ ಒಂದು ಹೊಸ ಪದ್ಧತಿಯು ಇತಿಹಾಸ ಕಾಲದಿಂದ ಪ್ರಾರಂಭವಾಯಿತು.

ಆ ೨. ಭಾವನಿಕ ಮಹತ್ವ : ರಾಖಿಯನ್ನು ಸಹೋದರಿಯು ಸಹೋದರನ ಕೈಗೆ ಕಟ್ಟುವುದಿರುತ್ತದೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. ಸಹೋದರಿಯು ಸಹೋದರನಿಗೆ ರಾಖಿಯನ್ನು ಕಟ್ಟುವುದಕ್ಕಿಂತ ಯಾರಾದರೊಬ್ಬ ತರುಣನು / ಪುರುಷನು ಯಾರಾದರೊಬ್ಬ ತರುಣಿಯಿಂದ / ಸ್ತ್ರೀಯಿಂದ ರಾಖಿಯನ್ನು ಕಟ್ಟಿಸಿಕೊಳ್ಳುವುದು ಹೆಚ್ಚು ಮಹತ್ವದ್ದಾಗಿದೆ; ಇದರಿಂದ ತರುಣಿಯ ಕಡೆಗೆ / ಸ್ತ್ರೀಯರ ಕಡೆಗೆ ನೋಡುವ ವಿಶೇಷವಾಗಿ ಯುವಕರ ಮತ್ತು ಪುರುಷರ ದೃಷ್ಟಿಕೋನವು ಬದಲಾಗುತ್ತದೆ.

ಆ೩. ರಾಖಿಯನ್ನು ಕಟ್ಟುವುದು : ಅಕ್ಕಿ, ಬಂಗಾರ ಮತ್ತು ಬಿಳಿ ಸಾಸಿವೆಗಳನ್ನು ಒಂದು ಗೂಡಿಸಿ ಸೆರಗಿನಲ್ಲಿ ಕಟ್ಟಿದರೆ ರಕ್ಷಾ ರ‍್ಥಾತ್ರಾಖಿಯುತಯಾರಾಗುತ್ತದೆ.

ಏನ ಬದ್ಧೋ ಬಲೀ ರಾಜಾ

ದಾನವೇಂದ್ರೋ ಮಹಾಬಲಃ |

ತೇನ ತ್ವಾಮಪಿ ಬಧ್ನಾಮಿ

ರಕ್ಷೇ ಮಾ ಚಲ ಮಾ ಚಲ ||

ಅರ್ಥ : ಮಹಾಬಲಿ ಮತ್ತು ದಾನವೇಂದ್ರನಾದ ಬಲಿರಾಜನು ಯಾವುದರಿಂದ ಬದ್ಧನಾದನೋ, ಆ ರಾಖಿಯಿಂದ ನಾನು ನಿನ್ನನ್ನೂ ಕಟ್ಟುತ್ತೇನೆ. ಎಲೈ ರಾಖಿಯೇ, ನೀನು ವಿಚಲಿತಳಾಗಬೇಡ.

ಆ ೪. ಪ್ರಾರ್ಥನೆ : ಸಹೋದರಿಯು ಸಹೋದರನ ಕಲ್ಯಾಣಕ್ಕಾಗಿ ಮತ್ತು ಸಹೋದರನು ಸಹೋದರಿಯ ರಕ್ಷಣೆಗಾಗಿ ಪ್ರಾರ್ಥನೆಯನ್ನು ಮಾಡುವುದರೊಂದಿಗೆ ಇಬ್ಬರೂ ‘ರಾಷ್ಟ್ರಮತ್ತು ಧರ್ಮದ ರಕ್ಷಣೆಗಾಗಿ ನಮ್ಮಿಂದ ಪ್ರಯತ್ನವಾಗಲಿ, ಎಂದು ಈಶ್ವರನಲ್ಲಿ ಪ್ರಾರ್ಥನೆಯನ್ನು ಮಾಡಬೇಕು.

ಆ ೫. ರಾಖಿಯ ಮಾಧ್ಯಮದಿಂದಾಗುವ ದೇವತೆಗಳ ವಿಡಂಬನೆಯನ್ನು ತಡೆಗಟ್ಟಿ ! : ಇತ್ತೀಚೆಗೆ ರಾಖಿಯ ಮೇಲೆ ‘ಓಂ ಅಥವಾ ದೇವತೆಗಳ ಚಿತ್ರಗಳಿರುತ್ತವೆ. ರಾಖಿಯನ್ನು ಉಪಯೋಗಿಸಿದ ನಂತರ ಅದು ಆಚೀಚೆ ಬಿದ್ದು ದೇವತೆಗಳ ಅಥವಾ ರ‍್ಮಪ್ರತೀಕಗಳ ವಿಡಂಬನೆಯಾಗುತ್ತದೆ. ಇದರಿಂದ ಪಾಪ ತಗಲುತ್ತದೆ. ಇದನ್ನು ತಡೆಗಟ್ಟಲು ರಾಖಿಯನ್ನು ನೀರಿನಲ್ಲಿ ವಿರ‍್ಜಿಸಬೇಕು !

(ಆಧಾರ: ಸನಾತನ ನಿರ್ಮಿತ ಗ್ರಂಥ ‘ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ)