
ಶೋಪಿಯಾ (ಜಮ್ಮು-ಕಾಶ್ಮೀರ) – ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಗುರಿಯಾಗಿಸುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆಗಸ್ಟ್ ೧೬ ರಂದು ಇಲ್ಲಿಯ ಚೋಟೆಪೊರಾ ಪ್ರದೇಶದ ಸೇಬಿನ ತೋಟದಲ್ಲಿ ಕೆಲಸ ಮಾಡುವ ಇಬ್ಬರ ಕಾಶ್ಮೀರಿ ಹಿಂದೂಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ. ಅದರಲ್ಲಿ ಒಬ್ಬನು ಸಾವನ್ನಪ್ಪಿದರೇ ಮತ್ತೊಬ್ಬ ಗಾಯಗೊಂಡಿದ್ದಾನೆ. ಇವರಿಬ್ಬರೂ ಸೋದರರಾಗಿದ್ದರು. ಮೃತ ಹಿಂದೂವಿನ ಹೆಸರು ಸುನಿಲ ಕುಮಾರ ಎಂದು ಇದೆ. ಈ ದಾಳಿಯ ನಂತರ ಭದ್ರತಾ ಪಡೆಯವರು ಈ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಕಾಶ್ಮೀರದಲ್ಲಿ ಕಲಂ ೩೭೦ ತೆರೆವು ಗೊಳಸಿದನಂತರ ಹಿಂದೂಗಳನ್ನು ಹಾಗೂ ರಾಜ್ಯದ ಹೊರಗಿನ ನಾಗರೀಕರನ್ನು ಗುರಿಯಾಗಿಸಿ ದಾಳಿ ಮಾಡುವ ಘಟನೆ ಹೆಚ್ಚಿದೆ. ಈ ವರ್ಷ ಇಂತಹ ಒಟ್ಟು ೧೬ ಘಟನೆಗಳು ಘಟಿಸಿದೆ. ಈ ಮೂಲಕ ಅವರು ಕಾಶ್ಮೀರಿ ಹಿಂದೂಗಳಿಗೆ ಕಾಶ್ಮೀರ ಕಣಿವೆಯಲ್ಲಿ ಪುನರ್ವಸತಿ ಮಾಡುವ ಪ್ರಯತ್ನಕ್ಕೆ ವಿರೋಧ ವ್ಯಕ್ತಪಡಿಸುವ ಪ್ರಯತ್ನ ಮಾಡುತ್ತಿದ್ದಾರೆ.
कश्मीर में फिर से टारगेट किलिंग… दो कश्मीरी हिन्दुओं को बनाया निशाना, एक की मौत एक घायल#TargetKilling @JmuKmrPolice @OfficeOfLGJandK @AmitShah https://t.co/93KZvRGYF1
— Sudarshan News (@SudarshanNewsTV) August 16, 2022
ಸಂಪಾದಕೀಯ ನಿಲುವುಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಪ್ರತಿದಿನ ಜಿಹಾದಿ ಭಯೋತ್ಪಾದಕರನ್ನು ಕೊಲ್ಲುತ್ತಿದ್ದರೂ ಅಲ್ಲಿಯ ಭಯೋತ್ಪಾದನೆ ಮುಗಿದಿಲ್ಲ ಮತ್ತು ಎಲ್ಲಿಯವರೆಗೆ ಅದರ ನಿರ್ಮಾಣ ಮಾಡುವ ಪಾಕಿಸ್ತಾನವನ್ನು ಮುಗಿಸುವುದಿಲ್ಲವೋ ಅಲ್ಲಿಯವರೆಗೆ ಜಿಹಾದಿ ಮಾನಸಿಕತೆ ನಾಶ ಮಾಡಲಾಗುವುದಿಲ್ಲ. ಅಲ್ಲಿಯವರೆಗೆ ಈ ಭಯೋತ್ಪಾದನೆ ನಾಶವಾಗುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! |
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ