
ಚಂಡೀಗಡ – ಪಂಜಾಬ್ನಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕಳೆದ ೫ ತಿಂಗಳಲ್ಲಿ ೧೩೫ ಸರಕಾರಿ ಅಧಿಕಾರಿಗಳು ಸೇರಿದಂತೆ ಒಟ್ಟು ೨೦೦ ಜನರನ್ನು ಬಂಧಿಸಲಾಗಿದೆ. ರಾಜ್ಯದ ಕಾವಲು ಪಡೆಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಲಂಚ ಪಡೆದ ಪ್ರಕರಣದಲ್ಲಿ ಬಂಧಿತರಾಗಿರುವ ೧೩೫ ಅಧಿಕಾರಿಗಳ ಪೈಕಿ ೨೫ ಮಂದಿ ಗೆಜೆಟೆಡ್ (ಕ್ಲಾಸ್ ಒನ್) ಅಧಿಕಾರಿಗಳಿದ್ದಾರೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಭಾರತೀಯ ಆಡಳಿತ ಸೇವೆ (ಐ.ಎ.ಎಸ್. ಹುದ್ದೆಯ) ಒಬ್ಬ ಅಧಿಕಾರಿ ಮತ್ತು ೩೦ ಪೊಲೀಸ್ ಅಧಿಕಾರಿಗಳು ಸಹಭಾಗಿಯಾಗಿದ್ದಾರೆ. ಪಂಜಾಬ್ನಲ್ಲಿ ಆಪ್ ಸರಕಾರ ಅಧಿಕಾರಕ್ಕೆ ಬಂದ ನಂತರ, ಭ್ರಷ್ಟಾಚಾರ ವಿರೋಧಿ ಅಭಿಯಾನವನ್ನು ಕೈಗೊಂಡಿತ್ತು. ಈ ಅಭಿಯಾನದ ಭಾಗವಾಗಿ, ಭ್ರಷ್ಟಾಚಾರದ ಆರೋಪ ಹೊತ್ತಿರುವ ಹಾಲಿ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ವಜಾಗೊಳಿಸಿ ಬಂಧಿಸಲಾಗಿತ್ತು ಮತ್ತು ಆಗಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಸಚಿವರಾಗಿದ್ದ ಸಾಧುಸಿಂಹ ಧರ್ಮಸೋತ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಲಾಗಿತ್ತು.
ಸಂಪಾದಕೀಯ ನಿಲುವುಬಂಧಿತ ಭ್ರಷ್ಟ ಅಧಿಕಾರಿಗಳ ಸಂಖ್ಯೆ ಇಷ್ಟಿದ್ದರೆ, ಬಂಧನ ಆಗದಿರುವವರ ಸಂಖ್ಯೆ ಎಷ್ಟಿರಬಹುದು, ಯೋಚಿಸದಿರುವುದೇ ಉತ್ತಮ ! ಆಡಳಿತ ವ್ಯವಸ್ಥೆಯು ಭ್ರಷ್ಟಮಯವಾಗಿ ಮಾರ್ಪಟ್ಟಿರುವುದರ ಸೂಚನೆಯಾಗಿದೆ ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ