
ಚಂಡೀಗಡ – ಪಂಜಾಬ್ನಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕಳೆದ ೫ ತಿಂಗಳಲ್ಲಿ ೧೩೫ ಸರಕಾರಿ ಅಧಿಕಾರಿಗಳು ಸೇರಿದಂತೆ ಒಟ್ಟು ೨೦೦ ಜನರನ್ನು ಬಂಧಿಸಲಾಗಿದೆ. ರಾಜ್ಯದ ಕಾವಲು ಪಡೆಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಲಂಚ ಪಡೆದ ಪ್ರಕರಣದಲ್ಲಿ ಬಂಧಿತರಾಗಿರುವ ೧೩೫ ಅಧಿಕಾರಿಗಳ ಪೈಕಿ ೨೫ ಮಂದಿ ಗೆಜೆಟೆಡ್ (ಕ್ಲಾಸ್ ಒನ್) ಅಧಿಕಾರಿಗಳಿದ್ದಾರೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಭಾರತೀಯ ಆಡಳಿತ ಸೇವೆ (ಐ.ಎ.ಎಸ್. ಹುದ್ದೆಯ) ಒಬ್ಬ ಅಧಿಕಾರಿ ಮತ್ತು ೩೦ ಪೊಲೀಸ್ ಅಧಿಕಾರಿಗಳು ಸಹಭಾಗಿಯಾಗಿದ್ದಾರೆ. ಪಂಜಾಬ್ನಲ್ಲಿ ಆಪ್ ಸರಕಾರ ಅಧಿಕಾರಕ್ಕೆ ಬಂದ ನಂತರ, ಭ್ರಷ್ಟಾಚಾರ ವಿರೋಧಿ ಅಭಿಯಾನವನ್ನು ಕೈಗೊಂಡಿತ್ತು. ಈ ಅಭಿಯಾನದ ಭಾಗವಾಗಿ, ಭ್ರಷ್ಟಾಚಾರದ ಆರೋಪ ಹೊತ್ತಿರುವ ಹಾಲಿ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ವಜಾಗೊಳಿಸಿ ಬಂಧಿಸಲಾಗಿತ್ತು ಮತ್ತು ಆಗಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಸಚಿವರಾಗಿದ್ದ ಸಾಧುಸಿಂಹ ಧರ್ಮಸೋತ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಲಾಗಿತ್ತು.
ಸಂಪಾದಕೀಯ ನಿಲುವುಬಂಧಿತ ಭ್ರಷ್ಟ ಅಧಿಕಾರಿಗಳ ಸಂಖ್ಯೆ ಇಷ್ಟಿದ್ದರೆ, ಬಂಧನ ಆಗದಿರುವವರ ಸಂಖ್ಯೆ ಎಷ್ಟಿರಬಹುದು, ಯೋಚಿಸದಿರುವುದೇ ಉತ್ತಮ ! ಆಡಳಿತ ವ್ಯವಸ್ಥೆಯು ಭ್ರಷ್ಟಮಯವಾಗಿ ಮಾರ್ಪಟ್ಟಿರುವುದರ ಸೂಚನೆಯಾಗಿದೆ ! |
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಅನ್ಯಾಯದ ಬಂಧನದ ವಿರುದ್ಧ ಅಲ್ಪಸಂಖ್ಯಾತರಿಂದ ಪ್ರತಿಭಟನೆ !