
ಇಸ್ಲಾಮಾಬಾದ್ – ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಯುದ್ಧವು ಒಂದು ಆಯ್ಕೆಯಲ್ಲ. ನಾವು ಭಾರತದೊಂದಿಗಿನ ಗಡಿ ವಿವಾದವನ್ನು ಪರಿಹರಿಸಲು ಬಯಸುತ್ತೇವೆ. ನಮಗೆ ಶಾಶ್ವತ ಶಾಂತಿ ಬೇಕಾಗಿದೆ. ಪಾಕಿಸ್ತಾನ ಮತ್ತು ಭಾರತವು ವ್ಯಾಪಾರ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಪರಸ್ಪರ ಪೈಪೋಟಿ ನಡೆಸಬೇಕು ಎಂದು ಪಾಕ್ ಪ್ರಧಾನಿ ಶಾಹಬಾಜ್ ಷರೀಫ್ ಅವರು ಅಮೆರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಸೌಮ್ಯ ನಿಲುವನ್ನು ತಾಳುತ್ತಾ ಹೇಳಿದರು. (ಮೊಸಳೆ ಕಣ್ಣೀರನ್ನು ಸುರಿಸಿದರು.) ಪ್ರಸ್ತುತ, ಪಾಕಿಸ್ತಾನವು ಆರ್ಥಿಕ ದಿವಾಳಿತನದ ಹೊಸ್ತಿಲಿನಲ್ಲಿ ನಿಂತಿದೆ. ಬಡವಾದ ಪಾಕಿಸ್ತಾನ ಭಾರತದೊಂದಿಗೆ ಯುದ್ಧವನ್ನು ಎದುರಿಸಲು ಸಾಧ್ಯವಿಲ್ಲ. ತನ್ನ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಅದು ಭಾರತದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಾರ ಮಾಡಲು ಬಯಸುತ್ತಿದೆ. ಈ ಹಿನ್ನೆಲೆಯಲ್ಲಿ ಷರೀಫ್ ಈ ಹೇಳಿಕೆಯನ್ನು ನೀಡಿದ್ದಾರೆ ಎನ್ನಲಾಗುತ್ತಿದೆ.
#IEWorld | Want ‘permanent peace’ with India; war never an option to resolve Kashmir issue: Pak PM Sharif#ShehbazSharif #Kashmirhttps://t.co/34ItOmoSSJ
— The Indian Express (@IndianExpress) August 20, 2022
ಸಂಪಾದಕೀಯ ನಿಲುವುಭಾರತವು ಪಾಕಿಸ್ತಾನದ ಪ್ರಧಾನಿಯ ಈ ಹೇಳಿಕೆಯನ್ನು ನಂಬದೆ, ಅದರ ವಿರುದ್ಧ ಆಕ್ರಮಣಕಾರಿ ನೀತಿಯನ್ನು ಅನುಸರಿಸುವುದೇ ಅವಶ್ಯಕವಾಗಿದೆ! |
‘ಡೊಮಿನಿಕನ್ ರಿಪಬ್ಲಿಕ್’ನಲ್ಲಿ ಜೆಟ್ ವಿಮಾನ ಪತನ : ಪೈಲಟ್ ಮತ್ತು ಸಹ-ಪೈಲಟ್ ಸಾವು !
‘ಬ್ರಿಕ್ಸ್’ ಜಾಗತಿಕ ಆರ್ಥಿಕತೆಯ ಹೊಸ ಮಹಾಶಕ್ತಿ ! – ವ್ಲಾಡಿಮಿರ್ ಪುಟಿನ್
ಇರಾನ್-ಇಸ್ರೇಲ್ ನಡುವೆ ಮತ್ತೆ ಭುಗಿಲೆದ್ದ ಯುದ್ಧದ ಕಿಚ್ಚು !
ಫಿಲಿಪೈನ್ಸ್ನಲ್ಲಿ 7.8 ರಿಕ್ಟರ್ ತೀವ್ರತೆಯ ಭೂಕಂಪ : 19 ಜನರ ಸಾವು !
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ಭಾರತದಲ್ಲಿ ಕುಸಿಯುತ್ತಿರುವ ಪ್ರಜನನ ದರದ ಕುರಿತು ಇಲಾನ್ ಮಸ್ಕ್ ಕಳವಳ