
ಲಕ್ಷ್ಮಣಪುರಿ (ಉತ್ತರಪ್ರದೇಶ) – ಇಲ್ಲಿಯ ಟಿಲೆ ವಾಲಿ ಮಸೀದಿಯ ಬಳಿಯಿರುವ ‘ಲೇಟೆ ಹೂಯೆ ಹನುಮಾನ್ ಮಂದಿರ’ದಲ್ಲಿ ೨ ವಿಗ್ರಹಗಳನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೌಫೀಕ್ನನ್ನು ಬಂಧಿಸಿದ್ದಾರೆ. ಸದ್ಯ ಇಲ್ಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯ ಕುರಿತು ಸ್ಥಳೀಯ ಶಾಸಕ ನೀರಜ ಬೋರಾ ಇವರು, ಇದರ ಹಿಂದೆ ಗಲಭೆ ಸೃಷ್ಟಿಸುವ ಉದ್ದೇಶ ಇರಬಹುದು ಎಂದು ಹೇಳಿದ್ದಾರೆ.
ದೇವಾಲಯದ ಅರ್ಚಕರ ಪ್ರಕಾರ, ಶನಿದೇವ ಮತ್ತು ಶ್ರೀ ಹನುಮಂತನ ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ. ಇಲ್ಲಿ ಮಂಗಲ ಮಹೋತ್ಸವ ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ದೇವಸ್ಥಾನಕ್ಕೆ ಬಂದು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಾ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾನೆ. ಈ ವೇಳೆ ದೇವಸ್ಥಾನದಲ್ಲಿದ್ದ ಭಕ್ತರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನ ಹೆಸರು ತೌಫಿಕ್ ಎಂದು ಹೇಳಿದ್ದಾನೆ. (ವಿಗ್ರಹ ಒಡೆಯುವಾಗ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುವ ಮೂಲಕ ‘ವಿಗ್ರಹವನ್ನು ಧ್ವಂಸ ಮಾಡುವವ ಹಿಂದೂವೇ ಆಗಿದ್ದಾರೆ’, ಎಂದು ಬಿಂಬಿಸಲು ತೌಫಿಕ್ನು ಪ್ರಯತ್ನಿಸಿದ್ದಾನೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! – ಸಂಪಾದಕರು)
Uttar Pradesh | A person vandalised two idols at hanuman temple in Lucknow. He was arrested immediately. Police interrogated the accused. Medical examination showed he was drunk. Stringent action has been initiated against him: S Channappa, DCP West, Lucknow pic.twitter.com/Pvfqq4ghSL
— ANI UP/Uttarakhand (@ANINewsUP) September 8, 2022
ಸಂಪಾದಕೀಯ ನಿಲುವು
|
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!