ಸನಾತನದ ಆಯುವೇದಿಕ ಔಷಧಿಗಳು

೧. ಕೆಮ್ಮು, ಗಂಟಲು ನೋವು, ಗಂಟಲು ಕೆರೆತ, ಗಂಟಲು ಕೂರುವುದು, ಗಂಟಲಿನಿಂದ ಕಫ ಹೊರಗೆ ಬೀಳದಿರುವುದು ಮತ್ತು ಬಾಯಿ ಹುಣ್ಣು : ಕಾಲು ಚಮಚದಷ್ಟು ಜೇಷ್ಠಮಧು ಚೂರ್ಣವನ್ನು ದಿನಕ್ಕೆ ೩-೪ ಬಾರಿ ಜಗಿದು ತಿನ್ನಬೇಕು. (೫ ದಿನ)
೨. ಮಲಬದ್ಧತೆ : ಎರಡು ಊಟದ ಮೊದಲು ೧ ಚಮಚ ಜೇಷ್ಠಮಧು ಚೂರ್ಣ ಮತ್ತು ೧ ಚಿಟಿಕೆ ಉಪ್ಪು ಅರ್ಧ ಬಟ್ಟಲು ಉಗುರುಬೆಚ್ಚ ನೀರಿನಲ್ಲಿ ಸೇರಿಸಿ ಕುಡಿಯಬೇಕು. (೧೫ ದಿನ)
೩. ಉಷ್ಣತೆಯ ರೋಗ (ಉಷ್ಣ ಪದಾರ್ಥಗಳ ತೊಂದರೆಯಾಗುವುದು, ಬಾಯಿ ಹುಣ್ಣು, ಮೈಯೆಲ್ಲ ಉರಿಯುವುದು, ಮೂತ್ರಮಾರ್ಗದಲ್ಲಿ ಉರಿಯುವುದು, ಮೈಮೇಲೆ ಬೊಕ್ಕೆಗಳಾಗುವುದು, ತಲೆ ಸುತ್ತುವುದು ಇತ್ಯಾದಿಗಳು) : ದಿನಕ್ಕೆ ೨-೩ ಬಾರಿ ೧ ಚಮಚ ಜೇಷ್ಠಮಧು ಚೂರ್ಣ ೧ ಚಮಚ ತುಪ್ಪದಲ್ಲಿ ತೆಗೆದುಕೊಳ್ಳಬೇಕು. (೧೫ ದಿನ)
೧. ಅಳತೆಗಾಗಿ ಚಹಾದ ಚಮಚವನ್ನು ಉಪಯೋಗಿಸಬೇಕು.
೨. ಇಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಕೊಡಲಾಗಿದೆ. ೭ ದಿನಗಳಲ್ಲಿ ಗುಣಮುಖವಾಗದಿದ್ದರೆ ವೈದ್ಯರ ಸಲಹೆಯನ್ನು ಪಡೆಯಬೇಕು.
೩. ಸನಾತನ ಯಷ್ಟಿಮಧು (ಜೇಷ್ಠಮಧು) ಚೂರ್ಣವು ಲಭ್ಯವಿದೆ. ಇದರಿಂದ ಇತರ ರೋಗಗಳ ಮೇಲೆ ವಿವರವಾದ ಉಪಯೋಗವನ್ನು ಆ ಡಬ್ಬಿಯಲ್ಲಿನ ಪತ್ರದಲ್ಲಿ ಕೊಡಲಾಗಿದೆ.
೪. ಇಲ್ಲಿ ಕೊಟ್ಟಿರುವ ಮಾಹಿತಿ ಮತ್ತು ಪತ್ರದಲ್ಲಿನ ಮಾಹಿತಿಗಳಲ್ಲಿ ವ್ಯತ್ಯಾಸ ಇರಬಹುದು. ಎರಡರಲ್ಲಿ ಯಾವುದೇ ರೀತಿಯ ಔಷಧದ ಉಪಯೋಗವನ್ನು ಮಾಡಬಹುದು.
– ವೈದ್ಯ ಮೇಘರಾಜ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೮.೮.೨೦೨೨)
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಮನುಷ್ಯ, ಮನಸ್ಸು ಹಾಗೂ ಆಹಾರ
ಅತಿ ಮುಟ್ಟಿನ ರಕ್ತಸ್ರಾವ (ರಕ್ತಪದರ) ಮತ್ತು ಆಯುರ್ವೇದ
ಔಷಧೀಯ ಸಸ್ಯಗಳನ್ನು ಹೇಗೆ ಬೆಳೆಸಬೇಕು ?
‘ಎನ್ಸಿಇಆರ್ಟಿ’ ಮೂರನೇ ತರಗತಿಯ ಪುಸ್ತಕದಲ್ಲಿ ‘ಎಐ’ (ಕೃತಕ ಬುದ್ಧಿಮತ್ತೆ) ಮತ್ತು 6ನೇ ತರಗತಿಯಿಂದ 8ನೇ ತರಗತಿಯ ವಿಜ್ಞಾನ ಪುಸ್ತಕಗಳಲ್ಲಿ ಆಯುರ್ವೇದ ಸೇರ್ಪಡೆ.