(ಇಮಾಮ್ ಎಂದರೆ ಮಸೀದಿಯಲ್ಲಿ ಪ್ರಾರ್ಥನೆ ನಡೆಸುವವನು)

ನವ ದೆಹಲಿ – ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಇವರನ್ನು ಕೆಲ ದಿನಗಳ ಹಿಂದೆ ‘ರಾಷ್ಟ್ರಪಿತಾ’ ಎಂದು ಸಂಬೋದಿಸಿದ್ದ ‘ಆಲ್ ಇಂಡಿಯಾ ಇಮಾಮ್ ಆರ್ಗನೈಸೇಷನ’ ನ ಮುಖ್ಯಸ್ಥರಾದ ಉಮರ್ ಅಹ್ಮದ್ ಇಲಿಯಾಸಿ ಅವರಿಗೆ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ಸೆಪ್ಟೆಂಬರ್ ೨೩ ರಿಂದ ಇಂಗ್ಲೆಂಡ್ ಮತ್ತು ಪಾಕಿಸ್ತಾನ ಸೇರಿದಂತೆ ಭಾರತದ ವಿವಿಧ ಭಾಗಗಳಿಂದ ನೂರಾರು ದೂರವಾಣಿ ಕರೆಗಳ ಮೂಲಕ ಈ ಬೆದರಿಕೆಗಳನ್ನು ನೀಡಲಾಗಿದೆ. ಈ ಸಂಬಂಧ ಅವರು ನೀಡಿದ ದೂರಿನ ಮೇರೆಗೆ ದೆಹಲಿಯ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಈ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ ಅಥವಾ ತಲೆಬಾಗುವುದಿಲ್ಲ’, ಎಂದು ಇಲಿಯಾಸಿ ಅವರು ಸ್ಪಷ್ಟಪಡಿಸಿದ್ದಾರೆ.
मोहन भागवत को राष्ट्रपिता कहने वाले इमाम को इंग्लैंड से मिली धमकी | @aviralhimanshu
— AajTak (@aajtak) September 30, 2022
ಸರಸಂಘಚಾಲಕರು ಸಹಸರ್ಕಾರ್ಯವಾಹರಾದ ಡಾ. ಕೃಷ್ಣ ಗೋಪಾಲ್, ಅಖಿಲ ಭಾರತ ಸಂವಹನ ಮುಖ್ಯಸ್ಥ ರಾಮ್ ಲಾಲ್ ಮತ್ತು ಹಿರಿಯ ಪ್ರಚಾರಕ ಇಂದ್ರೇಶ್ ಕುಮಾರ್ ಅವರೊಂದಿಗೆ ಮಸೀದಿಗೆ ತೆರಳಿ ಉಮರ್ ಅಹಮದ್ ಇಲಿಯಾಸಿ ಅವರನ್ನು ಭೇಟಿಯಾಗಿದ್ದರು. ಅಂದಿನಿಂದ ಇಮಾಮ್ ಉಮರ್ ಅಹಮದ್ ಇಲಿಯಾಸಿ ಅವರಿಗೆ ಬೆದರಿಕೆಗಳು ಬರುತ್ತಿವೆ. ಹಾಗಾಗಿ ಭದ್ರತಾ ಕಾರಣಗಳಿಂದಾಗಿ ಅವರು ತಮ್ಮ ಎಲ್ಲ ಸಾರ್ವಜನಿಕ ಕಾರ್ಯಕ್ರಮಗಳನ್ನೂ ರದ್ದುಗೊಳಿಸಿದ್ದಾರೆ.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ