
ಮೈನಪುರಿ (ಉತ್ತರಪ್ರದೇಶ) – ಇಲ್ಲಿ ೩ ತಿಂಗಳ ಹಿಂದೆ ಬಲಾತ್ಕಾರವಾದ ನಂತರ ಗರ್ಭಿಣಿಯಾದ ಅಪ್ರಾಪ್ತ ಯುವತಿಯನ್ನು ಜೀವಂತವಾಗಿ ಸುಡುವ ಪ್ರಯತ್ನವು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ೩ ಜನರ ವಿರುದ್ಧ ಅಪರಾಧವನ್ನು ದಾಖಲಿಸಿದ್ದಾರೆ.
ಹುಡುಗಿಯ ಊರಿನಲ್ಲಿ ವಾಸಿಸುವ ಅಭಿಷೇಕ ಎಂಬ ಹೆಸರಿನ ಯುವಕನು ೩ ತಿಂಗಳ ಹಿಂದೆ ಈ ಹುಡುಗಿಯ ಮೇಲೆ ಬಲಾತ್ಕಾರ ಮಾಡಿದ್ದನು; ಆದರೆ ಆಕೆಯು ಹೆದರಿ ಈ ಬಗ್ಗೆ ಯಾರಿಗೂ ಹೇಳಿರಲಿಲ್ಲ. ಕೆಲವು ದಿನಗಳ ನಂತರ ಆಕೆಗೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿತು, ಆಗ ಆಕೆಯ ತಪಾಸಣೆ ಮಾಡಿದಾಗ ಆಕೆ ಗರ್ಭಿಣಿಯಾಗಿರುವುದು ಗಮನಕ್ಕೆ ಬಂದಿತು. ಅನಂತರ ವಸ್ತುಸ್ಥಿತಿಯು ತಿಳಿದಾಗ ಪಂಚಾಯತ್ತಿನ ಸಭೆಯಲ್ಲಿ ಹುಡುಗಿ ಹಾಗೂ ಆರೋಪಿಗೆ ವಿವಾಹ ಮಾಡಿಸುವುದಾಗಿ ನಿಶ್ಚಯಿಸಲಾಯಿತು. ಅನಂತರ ಆರೋಪಿ ಅಭಿಷೇಕನ ತಾಯಿಯು ಸಂತ್ರಸ್ಥೆಯನ್ನು ಮನೆಗೆ ಕರೆದೊಯ್ದು ಆಕೆಯ ಮೇಲೆ ಪೆಟ್ರೋಲ್ ಸಿಂಪಡಿಸಿ ಆಕೆಯನ್ನು ಜೀವಂತವಾಗಿ ಸುಡಲು ಪ್ರಯತ್ನಿಸಿದಳು. ಇದರಲ್ಲಿ ಯುವತಿಯು ಗಂಭೀರವಾಗಿ ಸುಟ್ಟುಹೋಗಿದ್ದು ಆಕೆಯನ್ನು ಮೊದಲಿಗೆ ಮೈನಪುರಿಯ ಜಿಲ್ಲಾ ಆಸ್ಪತ್ರೆಗೆ ಹಾಗೂ ನಂತರ ಸೈಫಯಿ ಆಸ್ಪತ್ರೆಗೆ ಒಯ್ಯಲಾಯಿತು.
ಸಂಪಾದಕೀಯ ನಿಲುವುಇಂತಹವರಿಗೆ ಗಲ್ಲುಶಿಕ್ಷೆಯಾಗಲು ಉತ್ತರಪ್ರದೇಶದ ಭಾಜಪ ಸರಕಾರವು ಪ್ರಯತ್ನಿಸಬೇಕಿದೆ ! |
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ