
ಶ್ರೀನಗರ – ಜಮ್ಮು ಕಾಶ್ಮೀರದಲ್ಲಿನ ಅನಂತನಾಗದಲ್ಲಿ ನಡೆದಿರುವ ಚಕಮಕಿಯಲ್ಲಿ ಭದ್ರತಾ ಪಡೆಯಿಂದ ಇಬ್ಬರೂ ಭಯೋತ್ಪಾದಕರ ಹತ್ಯೆ ಮಾಡಲಾಗಿದೆ. ಅಕ್ಟೋಬರ್ ೯ ರಂದು ತಡರಾತ್ರಿ ಅನಂತನಾಗದಲ್ಲಿ ತಂಗಪಾವ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿ ಕುಳಿತಿರುವ ಮಾಹಿತಿ ಭದ್ರತಾ ಪಡೆಯವರಿಗೆ ದೊರೆತಿತ್ತು. ಅದರ ನಂತರ ಅವರು ಆ ಸ್ಥಳದಲ್ಲಿ ಸುತ್ತುವರೆದು ಶೋಧ ಕಾರ್ಯ ಆರಂಭಿಸಿದರು. ಆ ಸಮಯದಲ್ಲಿ ತಕ್ಷಣ ಭಯೋತ್ಪಾದಕರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದರು. ಚಕಮಕಿಯಲ್ಲಿ ಅಕ್ಟೋಬರ್ ೧೦ ರಂದು ಬೆಳಿಗ್ಗೆ ಇಬ್ಬರೂ ಭಯೋತ್ಪಾದಕರನ್ನು ಕೊಲ್ಲಲಾಯಿತು.
Big win for Forces; Two LeT #terrorists killed in #AnantnagEncounter | #JammuKashmir News https://t.co/Z1jE9ItFZ9
— Zee News English (@ZeeNewsEnglish) October 10, 2022
ಕಳೆದ ವಾರದಲ್ಲೇ ಜಮ್ಮು ಕಾಶ್ಮೀರದ ಶೋಪಿಯಾಂ ಜಿಲ್ಲೆಯಲ್ಲಿನ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ನಡೆಸಿರುವ ಜಂಟಿ ಕಾರ್ಯಾಚರಣೆಯಲ್ಲಿ ನಡೆದ ಬೇರೆಬೇರೆ ಚಕಮಕಿಯಲ್ಲಿ ೪ ಭಯೋತ್ಪಾದರು ಹತರಾಗಿದ್ದಾರೆ.
ಸಂಪಾದಕೀಯ ನಿಲುವುಭಯೋತ್ಪಾದಕರನ್ನು ನಿರ್ಮಾಣ ಮಾಡುವ ಪಾಕಿಸ್ತಾನವನ್ನು ಎಲ್ಲಿಯವರೆಗೆ ನಾಶ ಮಾಡಲಾಗುವುದಿಲ್ಲ ಅಲ್ಲಿಯವರೆಗೆ ದೇಶದಲ್ಲಿ ಭಯೋತ್ಪಾದನೆಯ ಸಮಸ್ಯೆ ಇರುವುದು ! ಅದಕ್ಕಾಗಿ ಪಾಕಿಸ್ತಾನವನ್ನು ನಾಶ ಮಾಡುವುದು ಅವಶ್ಯಕವಾಗಿದೆ, ಇದನ್ನು ಅರಿತುಕೊಳ್ಳಿ ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ