ಜೈಶ್-ಎ-ಮೊಹಮ್ಮದ್ ಎಂಬ ಭಯೋತ್ಪಾದಕ ಸಂಘಟನೆಯ ಹೆಸರಿನಲ್ಲಿ ರೈಲು ನಿಲ್ದಾಣಕ್ಕೆ ಕಳುಹಿಸಿದ ಪತ್ರ !

ಹರಿದ್ವಾರ (ಉತ್ತರಾಖಂಡ) – ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಅನೇಕ ರೈಲು ನಿಲ್ದಾಣಗಳನ್ನು ಬಾಂಬ್ಗಳಿಂದ ಸ್ಫೋಟಿಸಲಾಗುವುದು ಎಂದು ಹರಿದ್ವಾರ ರೈಲು ನಿಲ್ದಾಣಕ್ಕೆ ಬೆದರಿಕೆ ಪತ್ರ ಬಂದಿದೆ.
ಜೈಶ-ಎ-ಮೊಹಮ್ಮದ ಈ ಭಯೋತ್ಪಾದಕ ಸಂಘಟನೆಯಿಂದ ಈ ಪತ್ರ ಬಂದಿದೆ ಎಂದು ದಾವೆ ಮಾಡಲಾಗಿದೆ. ರೈಲು ನಿಲ್ದಾಣಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನು ಸಹ ಗುರಿಯಾಗಿಸಲಾಗುವುದು ಎಂದು ಅದು ಹೇಳಿದೆ. ಪತ್ರವನ್ನು ಸ್ವೀಕರಿಸಿದ ನಂತರ ಇಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
‘ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಯುತ್ತಿರುವ ಸಹಚರರ ಸೇಡು ತೀರಿಸಿಕೊಳ್ಳಲಾಗುವುದು’, ಎಂದು ಪತ್ರದಲ್ಲಿ ತಿಳಿಸಲಾಗಿದೆ. ಹರ್ ಕಿ ಪೌಡಿ, ಭಾರತಮಾತಾ ದೇವಾಲಯ, ಚಂಡಿದೇವಿ, ಮಾನಸದೇವಿ ಸಹಿತ ಹರಿದ್ವಾರದಲ್ಲಿನ ಮುಖ್ಯ ದೇವಸ್ಥಾನಗಳ ಸಹಿತ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ, ಬದರಿನಾಥ್ ಸ್ಥಳಗಳಲ್ಲಿ ಬಾಂಬ್ ಸ್ಫೋಟಗಳು ನಡೆಯಲಿವೆ ಎಂದು ಹೇಳಲಾಗಿದೆ.
ಸಂಪಾದಕೀಯ ನಿಲುವುಈ ಬೆದರಿಕೆಯು ಭಯೋತ್ಪಾದಕರಿಗೆ ಧರ್ಮವಿದೆ ಎಂದು ತೋರಿಸುತ್ತದೆ ! |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!