ಆಶ್ವಯುಜ ಕೃಷ್ಣ ತ್ರಯೋದಶಿ ಈ ದಿನ ವ್ಯಾಪಾರಿಗಳು ಕೊಪ್ಪರಿಗೆಯನ್ನು (ಕೋಶಾಗಾರ) ಪೂಜಿಸುತ್ತಾರೆ. ವ್ಯಾಪಾರಿ ವರ್ಷವು ಒಂದು ದೀಪಾವಳಿಯಿಂದ ಇನ್ನೊಂದು ದೀಪಾವಳಿಯ ವರೆಗೆ ಇರುತ್ತದೆ. ಹೊಸ ವರ್ಷದ ಲೆಕ್ಕದ ಖಾತೆ ಕಿರ್ದಿಗಳನ್ನು (ಪುಸ್ತಕಗಳನ್ನು) ಈ ದಿನವೇ ತರುತ್ತಾರೆ. ವಾಸ್ತವದಲ್ಲಿ ಲಕ್ಷ್ಮಿ ಪೂಜೆಯ ವೇಳೆ ಇಡೀ ವರ್ಷದ ಜಮಾಖರ್ಚನ್ನು ಕೊಡುವುದಿರುತ್ತದೆ. ಜಮೆ-ಖರ್ಚಿನ ಬಗ್ಗೆ ವರದಿಯನ್ನಿಟ್ಟು ಲಕ್ಷ್ಮಿಯ ಪೂಜೆ ಮಾಡುತ್ತಾರೆ.
ಭಾವಾರ್ಥ : ನಮ್ಮ ಜೀವನವು ಧನದಿಂದಾಗಿ ಸರಿಯಾಗಿ ನಡೆದಿರುತ್ತದೆ, ಆದುದರಿಂದ ಈ ಧನವನ್ನು ಪೂಜಿಸುತ್ತಾರೆ. ಇಲ್ಲಿ ‘ಧನ’ವೆಂದರೆ ಶುದ್ಧ ಲಕ್ಷ್ಮಿ. ಶ್ರೀಸೂಕ್ತದಲ್ಲಿ ವಸು, ಜಲ, ವಾಯು, ಅಗ್ನಿ ಮತ್ತು ಸೂರ್ಯ ಇವೆಲ್ಲವನ್ನು ಧನವೆಂದೇ ಪರಿಗಣಿಸಲಾಗಿದೆ. ಯಾವ ಧನಕ್ಕೆ ನಿಜವಾದ ಅರ್ಥವಿದೆಯೋ ಅವಳೇ ನಿಜವಾದ ಲಕ್ಷ್ಮಿ ! ಧನತ್ರಯೋದಶಿಯವರೆಗೆ ಬಾಕಿ ಉಳಿದ ಸಂಪತ್ತನ್ನು ಪ್ರಭುಕಾರ್ಯಕ್ಕಾಗಿ ಖರ್ಚು ಮಾಡಬೇಕು, ಸತ್ಕಾರ್ಯಕ್ಕೆ ಖರ್ಚು ಮಾಡಿದರೆ ಧನಲಕ್ಷ್ಮಿಯು ಶಾಶ್ವತವಾಗಿ ಲಕ್ಷ್ಮಿರೂಪದಲ್ಲಿ ಮನೆಯಲ್ಲಿರುತ್ತಾಳೆ. ಹಬ್ಬ
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?
ಅಕ್ಷಯ ತದಿಗೆಯ ಶುಭ ಮುಹೂರ್ತದ ಮಹತ್ವ !