
ಬೆಂಗಳೂರು – ಕರ್ನಾಟಕದ ಭಾಜಪ ಸರಕಾರದ ಸಚಿವ ವಿ. ಸೋಮಣ್ಣ ಅವರಿಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಸಾರಗೊಳ್ಳುತ್ತಿದೆ. ಈ ವಿಡಿಯೋದಲ್ಲಿ ಸೋಮಣ್ಣರವರ ಬಳಿ ದೂರು ನೀಡಲು ಬಂದ ಮಹಿಳೆಗೆ ಕಪಾಳಕ್ಕೆ ಹೊಡೆಯುತ್ತಿರುವುದು ಕಾಣುತ್ತಿದೆ. ಆ ನಂತರವೂ ಸಂಬಂಧಪಟ್ಟ ಮಹಿಳೆಯು ಅವರ ಕಾಲು ಹಿಡಿದು ‘ನನಗೆ ಸಹಾಯ ಮಾಡಿ’ ಎಂದು ಬೇಡಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಅಕ್ಟೋಬರ್ ೨೨ ರಂದು ನಡೆದಿದೆ ಎನ್ನಲಾಗುತ್ತಿದೆ.
ಈ ವಿಡಿಯೋ ಪ್ರಸಾರವಾದ ನಂತರ ಭಾಜಪದ ವಿರುದ್ಧ ಕಾಂಗ್ರೆಸ ಖಂಡಿಸಿದೆ. ರಾಜ್ಯಸಭೆಯಲ್ಲಿನ ಕಾಂಗ್ರೆಸ ಸಂಸದ ರಣದೀಪ ಸಿಂಗ ಸುರ್ಜೇವಾಲಾ ಇವರು, ‘ಇದು ಕರ್ನಾಟಕದ ಸಚಿವರ ಮತ್ತು ಭಾಜಪ ನಾಯಕರ ಅಧಿಕಾರದ ದುರಹಂಕಾರವು ನೆತ್ತಿಗೇರಿದೆ ಮತ್ತು ಅದೇ ಮಾತನಾಡುತ್ತಿದೆ ! ಎಂದು ಟ್ವೀಟ್ ಮಾಡಿದ್ದಾರೆ.
ಸಂಪಾದಕೀಯ ನಿಲುವುಇದು, ಜನರ ಸಮಸ್ಯೆಗಳ ಬಗ್ಗೆ ನಾಯಕರ ಸಂವೇದನಾಶೀಲ ಇಲ್ಲದಿರುವ ಸಂಕೇತವಾಗಿದೆ ! ಕರ್ನಾಟಕದ ಭಾಜಪ ಸರಕಾರ ಈ ಘಟನೆಯ ತನಿಖೆ ನಡೆಸಿ ಸಂಬಂಧಪಟ್ಟ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಅಪೇಕ್ಷೆ ! |
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ