ಕೇಂದ್ರ ಸರಕಾರದಿಂದ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಮಾಣಪತ್ರ
(ಸಿಎಎ ಎಂದರೆ ಪೌರತ್ವ ತಿದ್ದುಪಡಿ ಕಾಯ್ದೆ, ‘ಸಿಟಿಜನ್ ಶಿಪ್ ಅಮೆಂಡ್ಮೆಂಟ್ ಆಕ್ಟ್’)

ನವದೆಹಲಿ – ಪೌರತ್ವ ತಿದ್ದುಪಡಿ ಕಾಯ್ದೆ ೨೦೧೯ ಇದು ಅಸ್ಸಾಂ ಹಾಗೂ ಇತರ ಈಶಾನ್ಯ ರಾಜ್ಯಗಳ ಸ್ಥಳೀಯ ಸಾಂಸ್ಕೃತಿಕ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ, ಎಂದು ಕೇಂದ್ರ ಸರಕಾರದಿಂದ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಸ್ತುತಪಡಿಸಿರುವ ಪ್ರತಿಜ್ಞಾಪತ್ರದ ಮೂಲಕ ತನ್ನ ನಿಲುವನ್ನು ಮಂಡಿಸಿತು. ಈ ಕಾಯ್ದೆಯಲ್ಲಿ ಅಸ್ಸಾಂನ ವಿಶಿಷ್ಟ ಭಾಷೆ, ಲಿಪಿ ಅಥವಾ ಸಂಸ್ಕೃತಿ ಇದರ ಮೇಲೆ ಪರಿಣಾಮ ಬಿರುವಂತಹ ಯಾವುದೇ ನಿಬಂಧನೆ ಇಲ್ಲ, ಎಂದೂ ಸಹ ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ‘ಈ ಕಾಯ್ದೆ ಅಸ್ಸಾಂ ಒಪ್ಪಂದ ಹಾಗೂ ಅಲ್ಲಿಯ ಸಂಸ್ಕೃತಿಯ ಮೇಲೆ ಪರಿಣಾಮ ಬೀರುವುದು ಹಾಗೆ ಅದು ಸಂವಿಧಾನ ವಿರೋಧಿಯಾಗಿದೆ ಎಂದು ಆರೋಪಿಸುವ ಅರ್ಜಿಯ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ಕೇಂದ್ರ ಸರಕಾರದಿಂದ ಅದರ ಪಕ್ಷ ಮಂಡಿಸಲಾಯಿತು. ಈ ಪ್ರಕರಣದ ಮುಂದಿನ ವಿಚಾರಣೆ ಡಿಸೆಂಬರ್ ೬ ರಂದು ನಡೆಯುವುದು. ‘ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್’ ಮತ್ತು ಅಸ್ಸಾಂನ ಇತರ ಕೆಲವು ಅರ್ಜಿದಾರರು ಸಿಎಎ ವಿರುದ್ಧ ಮನವಿ ದಾಖಲಿಸಿದ್ದರು.
The Central Government has told the Supreme Court that the Citizenship Amendment Act 2019 does not violate the cultural rights of the indigenous people in Assam and North Eastern States.
Read more: https://t.co/jVohQfzHBI#SupremeCourtOfIndia pic.twitter.com/Hu7t4qJhaX— Live Law (@LiveLawIndia) October 31, 2022
ಕೇಂದ್ರ ಗೃಹ ಸಚಿವಾಲಯವು,
೧. ಪೌರತ್ವ ತಿದ್ದುಪಡಿ ಕಾಯ್ದೆಯು ಡಿಸೆಂಬರ್ ೩೧, ೨೦೧೪ ರ ಮೊದಲು ಅಫಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಇಲ್ಲಿಂದ ಧಾರ್ಮಿಕ ಕಿರುಕುಳದಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಹಿಂದೂ, ಸಿಖ್ಖ್, ಬೌದ್ಧ, ಜೈನ್, ಪಾರಸಿ ಮತ್ತು ಕ್ರೈಸ್ತ ಸಮುದಾಯದ ಜನರಿಗೆ ಪೌರತ್ವ ನೀಡುವ ಕುರಿತಾತ ಕಾಯ್ದೆ ಇದಾಗಿದೆ.
೨. ಈ ಕಾಯ್ದೆ ಸಂವಿಧಾನದ ಕಲಂ ೨೯ ರ ಅಡಿಯಲ್ಲಿ ಈಶಾನ್ಯ ರಾಜ್ಯಗಳ ಜನರ ಸಾಂಸ್ಕೃತಿಕ ಹಕ್ಕನ್ನು ನಿರ್ಲಕ್ಷಿಸುವುದಿಲ್ಲ ಎಂದು ಹೇಳಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ