‘ಹಿಂದೂ ಶಬ್ದ ಅಶ್ಲೀಲ’ ಎಂದು ಹೇಳುವ ಕಾಂಗ್ರೆಸ್ ಹಿಂದೂಗಳ ಮತ ಬೇಡ ಎಂದು ಹೇಳುವುದೇ ?

ಕಾಂಗ್ರೆಸ್ ನ ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು, ಹಿಂದೂ ಎಂಬ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಹಿಂದೂ ಪದವು ಪರ್ಷಿಯನ್ ಪದವಾಗಿದ್ದು ಭಾರತೀಯ ಪದವೇ ಅಲ್ಲ, ಎಲ್ಲಿಂದಲೋ ಬಂದಿರುವ ಹಿಂದೂ ಧರ್ಮವನ್ನು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ’ ಎಂದು ಹಿಂದೂ ಧರ್ಮವನ್ನು ಟೀಕಿಸಿದ್ದಾರೆ. ಸತೀಶ್ ಜಾರಕಿಹೊಳಿ ಇವರ ಈ ದ್ವೇಷಪೂರಿತ ಮಾತುಗಳನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.
ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ಅವರು ಅಲ್ಪಸಂಖ್ಯಾತರನ್ನು ಓಲೈಸಲು, ಹಿಂದೂ ಪದ ಕುರಿತು ಅವಹೇಳನಕಾರಿಯಾದ ಹೇಳಿಕೆ ನೀಡಿದ್ದು, ತಕ್ಷಣವೇ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.
ಕಾಂಗ್ರೆಸ್, ಒಡೆದಾಳುವ ನೀತಿ ಬಿಟ್ಟು, ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ pic.twitter.com/DSaAZ8y7D2— DD Chandana News (@DDChandanaNews) November 8, 2022
ಹಿಂದೂ ಧರ್ಮವು ಲಕ್ಷಾಂತರ ವರ್ಷಗಳ ಇತಿಹಾಸವನ್ನು ಹೊಂದಿದೆ. ಸಿಂಧು ನದಿಯಿಂದ ಹಿಂದೂ ಶಬ್ದ, ಹಿಂದೂ ಸಂಸ್ಕೃತಿಯು ಬಂದಿದೆ. ನಮ್ಮ ಋಗ್ವೇದ, ಅಥರ್ವವೇದ, ಮೇರುತಂತ್ರ ಮುಂತಾದ ಸಾವಿರಾರು ವರ್ಷಗಳ ಹಿಂದೆ ರಚಿತವಾದ ಪ್ರಾಚೀನ ಧರ್ಮ ಗ್ರಂಥಗಳಲ್ಲಿ ಹಿಂದೂ ಶಬ್ದದ ಉಲ್ಲೇಖವಿದೆ. ಮೇರುತಂತ್ರದಲ್ಲಿ ‘ಹಿನಾನಿ ಗುಣಾನಿ ದೂಷಯಿತಿ ಇತಿ ಹಿಂದೂ’ ಅಂದರೆ ‘ಹೀನ ದುರ್ಗುಣಗಳನ್ನು ತ್ಯಜಿಸಿದವನೇ ಹಿಂದೂ’ ಎಂಬ ಉಲ್ಲೇಖ ಮಾಡಲಾಗಿದೆ. ಮಾನ್ಯ ಸರ್ವೋಚ್ಚ ನ್ಯಾಯಾಲಯ ಸಹ ‘ಹಿಂದೂ ಎಂದರೆ ಒಂದು ಜೀವನ ಪದ್ಧತಿ’ ಎಂದು ಆದೇಶ ನೀಡಿದೆ. ಇಂತಹ ಮಹಾನ್ ಧರ್ಮವನ್ನು ‘ಅಶ್ಲೀಲವಿದೆ’ ಎಂದು ಹೇಳುವವರು ‘ಮುಸ್ಲಿಂ ಮತ್ತು ಕ್ರೈಸ್ತ ಮತಗಳು ಭಾರತದ ಮೂಲ’ ಎಂದು ಹೇಳುವುದು ಇವರ ಹಿಂದೂ ಧ್ವೇಷವನ್ನು ತೋರಿಸುತ್ತದೆ. ಹಿಂದೂ ಧರ್ಮದ ಮೂಲದ ಬಗ್ಗೆ ಮಾತನಾಡುವ ಮೊದಲು ನಿಮ್ಮ ಅಗ್ರನಾಯಕಿ ಸೋನಿಯಾ ಗಾಂಧಿಯ ಮೂಲದ ಬಗ್ಗೆ ಮಾತನಾಡಿ. ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದ ಮೇಲೆ ರಾಹುಲ್ ಗಾಂಧಿ ಯಾಕೆ ಚುನಾವಣೆ ಸಮಯದಲ್ಲಿ ದೇವಸ್ಥಾನಗಳಿಗೆ ಭೇಟಿ ಕೊಡುತ್ತಾರೆ ? ಹಿಂದೂ ಶಬ್ದದ ಮೂಲದ ಬಗ್ಗೆ ಆಕ್ಷೇಪ ಇರುವ ನೀವು ಹಿಂದುಗಳ ಮತ ನಮಗೆ ಬೇಡ ಎಂದು ಹೇಳುವ ಧೈರ್ಯವಿದೆಯೇ ?
ಸತೀಶ್ ಜಾರಕೀಹೊಳಿಯವರು ಹಿಂದೂಗಳಲ್ಲಿ ಬಹಿರಂಗವಾಗಿ ಕ್ಷಮಯಾಚಿಸಬೇಕು, ಇಲ್ಲದಿದ್ದರೆ ಎಲ್ಲಾ ಹಿಂದೂ ಸಂಘಟನೆಗಳು ಒಟ್ಟಾಗಿ ರಾಜ್ಯವ್ಯಾಪಿ ಆಂದೋಲನ ಮಾಡಲಾಗುವುದು’ ಎಂದು ಹಿಂದೂ ಜನಜಾಗೃತಿ ಸಮಿತಿ ಎಚ್ಚರಿಸುತ್ತದೆ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!