ಮಳಲಿ ಮಸೀದಿ ಇದು ಮೊದಲು ಹಿಂದೂ ದೇವಸ್ಥಾನ ಇತ್ತು ಎಂದು ವಿಶ್ವ ಹಿಂದೂ ಪರಿಷತ್ತಿನ ದಾವೆ !

ಮಂಗಳೂರು – ಮಂಗಳೂರಿನಲ್ಲಿಯ ಮಳಲಿ ಮಸೀದಿ ವಿವಾದದ ವಿಚಾರಣೆ ನಡೆಸುವಂತೆ ಕರ್ನಾಟಕ ನ್ಯಾಯಾಲಯ ನಿರ್ಧರಿಸಿದೆ. ವಿಶ್ವ ಹಿಂದೂ ಪರಿಷತ್ತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಈ ಮಸೀದಿ ದೇವಸ್ಥಾನದ ಜಾಗದಲ್ಲಿ ಕಟ್ಟಲಾಗಿದೆ ಎಂದು ದಾವೆ ಮಾಡಿತ್ತು. ಉತ್ತರ ಪ್ರದೇಶದಲ್ಲಿನ ಜ್ಞಾನವಾಪಿ ಮಸೀದಿಯಂತೆ ಸಮೀಕ್ಷೆಯ ಹಾಗೆ ಇಲ್ಲಿಯ ಮಸೀದಿಯ ಸಮೀಕ್ಷೆ ಕೂಡ ನಡೆಸಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ. ಮಸೀದಿಯ ಜೀರ್ಣೋದ್ಧಾರದ ಸಮಯದಲ್ಲಿ ಅದರ ರಚನೆ ಹಿಂದೂ ದೇವಸ್ಥಾನದ ಹಾಗೆ ಇರುವುದು ಬೆಳಕಿಗೆ ಬಂದಿದೆ.
ಮಳಲಿ ಮಸೀದಿ ವಿವಾದ – ವಿಹೆಚ್ಪಿ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು https://t.co/VIUqsE2kHL#Court #DakshinaKannada #Malali #Mangaluru #Mosque #VHP
— PublicTV (@publictvnews) November 9, 2022
‘ನ್ಯಾಯಾಲಯಕ್ಕೆ ಈ ಪ್ರಕರಣದ ಬಗ್ಗೆ ಗಮನ ನೀಡುವ ಅಧಿಕಾರವಿಲ್ಲ !’ (ಅಂತೆ) – ಮಸೀದಿಯ ವ್ಯವಸ್ಥಾಪಕರು ಮತ್ತು ಮುಸಲ್ಮಾನ ಸಂಘಟನೆ
ಮಸೀದಿಯ ವ್ಯವಸ್ಥಾಪಕರು ಮತ್ತು ಮುಸಲ್ಮಾನ ಸಂಘಟನೆ ಇವರು ನ್ಯಾಯಾಲಯಕ್ಕೆ ಈ ಪ್ರಕರಣದಲ್ಲಿ ಗಮನಹರಿಸುವ ಅಧಿಕಾರ ಇಲ್ಲವೆಂದು ಹೇಳಿದೆ. ಈ ಭೂಮಿ ವಕ್ಫ್ ಬೋರ್ಡ್ಗೆ ಸೇರಿದ್ದು ಇಲ್ಲಿ ಯಾವುದೇ ದೇವಸ್ಥಾನ ಇರಲಿಲ್ಲ, ಎಂದು ಯುಕ್ತಿವಾದ ಮಾಡಿದೆ. ಆದರೂ ನ್ಯಾಯಾಲಯವು ಮಳಲಿ ಮಸೀದಿಯ ವಿವಾದದ ಬಗ್ಗೆ ವಿಚಾರಣೆ ನಡೆಸುವುದಾಗಿ ಹೇಳುತ್ತಾ ತೀರ್ಪು ಬರೋವರೆಗೂ ಮಸೀದಿಯ ಪ್ರದೇಶದಲ್ಲಿ ಯಥಾವತ್ತಾಗಿ ಇರಿಸುವ ಆದೇಶ ನೀಡಿದೆ. ಅರ್ಜಿದಾರರಲ್ಲಿ ಒಬ್ಬರಾದ ವಿಶ್ವ ಹಿಂದೂ ಪರಿಷತ್ತಿನ ಮಳಲಿ ಮಸೀದಿಯ ಸಮೀಕ್ಷೆ ನಡೆಸುವುದಕ್ಕಾಗಿ ನ್ಯಾಯಾಲಯದ ಆಯೋಗ ನೇಮಕಗೊಳಿಸಲು ಒತ್ತಾಯಿಸಿದೆ.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ