ಹಿಂದೂ ಜನಜಾಗೃತಿ ಸಮಿತಿಯಿಂದ ಮಾರ್ಗದರ್ಶನ

ತುಮಕೂರು : ನವೆಂಬರ್ ೧೦ ಬುಧವಾರದಂದು ವಿಶ್ವ ಹಿಂದೂ ಪರಿಷತ್, ಬಜರಂಗಳದ ಕಾರ್ಯಕರ್ತರಿಗಾಗಿ ಸಾಮಾಜಿಕ ಮಾಧ್ಯಮಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು. ಬಜರಂಗದಳದ ತುಮಕೂರು ಜಿಲ್ಲಾ ಸಂಯೋಜಕರಾದ ಶ್ರೀ. ಮಂಜು ಭಾರ್ಗವ, ವಿಶ್ವ ಹಿಂದೂ ಪರಿಷತ್ತಿನ ತುಮಕೂರು ಜಿಲ್ಲಾ ಕಾರ್ಯದರ್ಶಿ ಶ್ರೀ. ಉದಯ ಕುಮಾರ್, ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ, ಸಮಿತಿಯ ಶ್ರೀ. ಸುಜನ ಇವರು ದೀಪಪ್ರಜ್ವಲನೆ ಹಾಗೂ ಪ್ರಭು ಶ್ರೀ ರಾಮ, ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಮೋಹನ ಗೌಡ ಇವರು ‘ಧರ್ಮಜಾಗೃತಿಯ ಕಾರ್ಯದಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಪ್ರಭಾವಿಯಾಗಿ ಉಪಯೋಗಿಸುವುದು ಹೇಗೆ ?’ ಎಂಬುದರ ಬಗ್ಗೆ ಮಾರ್ಗದರ್ಶನ ಮಾಡಿದರೆ ಶ್ರೀ. ಸುಜನ ಇವರು ವಿವಿಧ ಸಾಮಾಜಿಕ ಮಧ್ಯಮಗಳ ಬಳಕೆಯ ಬಗ್ಗೆ ಮಾಹಿತಿ ನೀಡಿದರು. ಈ ಶಿಬಿರಕ್ಕಾಗಿ ತುಮಕೂರು, ಗುಬ್ಬಿ, ಪಾವಗಡ, ತಿಪಟೂರು ಹೀಗೆ ಇತರ ಸ್ಥಳಗಳಿಂದ ೩೦ ಕ್ಕೂ ಹೆಚ್ಚು ಕಾರ್ಯಕರ್ತರು ಉಪಸ್ಥಿತರಿದ್ದರು.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಪ್ರಕರಣಗಳಲ್ಲಿ ಸಮಾನ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲು ಆಗ್ರಹ!
ಹಿಂದೂ ದೇವತೆಗಳ ಬಗ್ಗೆ ಹೇಳಿಕೆ ಬಳಿಕ ಹುಸೇನ್ ಶೇಖ್ ಕ್ಷಮೆಯಾಚನೆ : Hussain Sheikh Apology
ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಆದೇಶ!
ಫಲಕ ಪ್ರಸಿದ್ಧಿಯ ಮಾಧ್ಯಮದಿಂದ ಕರ್ನಾಟಕ ರಾಜ್ಯದಲ್ಲಿ ನಡೆದ ಪರಿಣಾಮಕಾರಿ ಧರ್ಮಪ್ರಸಾರ !
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!