ಹಿಂದೂ ಜನಜಾಗೃತಿ ಸಮಿತಿಯಿಂದ ಮಹಾರಾಷ್ಟ್ರದ ಮುಖ್ಯಮಂತ್ರಿ, ಗೃಹಸಚಿವರು ಹಾಗೂ ಪೊಲೀಸ್ ಆಯುಕ್ತರಿಗೆ ದೂರು !

ಮುಂಬೈ (ವಾರ್ತೆ): ಯಾರೋ ಬರುತ್ತಾರೆ ಮತ್ತು ‘ಕಾಮಿಡಿ’ ಹೆಸರಿನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಾರೆ ಮತ್ತು ದೇವರನ್ನು ಅಪಹಾಸ್ಯ ಮಾಡುತ್ತಾರೆ. ಈ ಹಿಂದೆ ‘ಸ್ಟ್ಯಾಂಡ್ ಅಪ್ ಕಾಮಿಡಿಯನ್’ ಮುನವ್ವರ್ ಫಾರೂಕಿ ಇದ್ದ, ಈಗ ವೀರ ದಾಸ ಬಂದಿದ್ದಾನೆ. ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗ ಪಡಿಸಿಕೊಳ್ಳಬೇಕೆಂದರೆ ಮುಸಲ್ಮಾನರ ಪ್ರವಾದಿ ಅಥವಾ ಕ್ರೈಸ್ತರ ದೇವದೂತರ ಕುರಿತು ‘ಕಾಮಿಡಿ’ ಮಾಡಿ ತೋರಿಸಲಿ ! ’ಸರ್ ತಾನ್ ಸೆ ಜುದಾ’ ಭಯದಿಂದ ಇಂದು ಯಾರೂ ಹಾಗೆ ಮಾಡಲು ಧೈರ್ಯ ಮಾಡಲಾರರು; ಆದರೆ ಹಿಂದೂಗಳು ಸಹಿಷ್ಣುಗಳಾಗಿರುವುದರಿಂದ ಅವರು ಕೇವಲ ವಿರೋಧಿಸುತ್ತಾರೆ ಎಂದು ಈ ದೇಶದ್ರೋಹಿಗಳಿಗೆ ತಿಳಿದಿದೆ. ಹಿಂದೂಗಳು ವಿರೋಧಿಸಿದರೆ, ಹಿಂದೂಗಳನ್ನೇ ಅಸಹಿಷ್ಣು ಎಂದು ಪರಿಗಣಿಸಲಾಗುತ್ತದೆ. ಈಗ ಅದು ಸಾಕು. ನಮ್ಮ ದೇವರನ್ನು ಅವಮಾನಿಸುವುದನ್ನು ನಾವು ಸಹಿಸುವುದಿಲ್ಲ. ಪೊಲೀಸರು ಮತ್ತು ಆಯೋಜಕರು ಈ ಕಾರ್ಯಕ್ರಮವನ್ನು ರದ್ದುಗೊಳಿಸದಿದ್ದರೆ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಮತ್ತು ಈ ಕಾರ್ಯಕ್ರಮಕ್ಕೆ ಅವಕಾಶ ನೀಡುವುದಿಲ್ಲ. ಹಿಂದೂಸ್ಥಾನದಲ್ಲಿ ವಾಸಿಸಬೇಕಾದರೆ ಹಿಂದೂಗಳ ದೇವರುಗಳನ್ನು ಗೌರವಿಸಬೇಕು ಎಂಬ ನಿಲುವನ್ನು ಹಿಂದೂ ಜನಜಾಗೃತಿ ಸಮಿತಿ ತೆಗೆದುಕೊಂಡಿದೆ.
ಹಿಂದೂ ಜನಜಾಗೃತಿ ಸಮಿತಿಯ ವಿರೋಧದಿಂದಾಗಿ ಕಳೆದ ವಾರ ಬೆಂಗಳೂರಿನಲ್ಲಿ ಇದೇ ವೀರ ದಾಸ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು. ಈಗ ಅದೇ ಕಾರ್ಯಕ್ರಮ ಮುಂಬಯಿನಲ್ಲಿ ನಡೆಯುತ್ತಿದೆ. ಈ ‘ಕಾಮಿಡಿ ಶೋ’ಗೆ ಹಿಂದುತ್ವನಿಷ್ಠ ಸಂಘಟನೆಗಳು ಮತ್ತು ರಾಷ್ಟ್ರಪ್ರೇಮಿ ನಾಗರಿಕರಿಂದ ತೀವ್ರ ವಿರೋಧವಾಗಿದೆ. ನವೆಂಬರ ೨೪ ರಂದು ಶಿವ (ಸಾಯನ) ಇಲ್ಲಿ ಷಣ್ಮುಖಾನಂದ ಸಭಾಂಗಣದಲ್ಲಿ ಆಯೋಜಿಸಲಾಗಿರುವ ‘ಕಾಮೆಡಿ ಶೋ’ ರದ್ದು ಪಡಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಹಾರಾಷ್ಟ್ರದ ಮಾನ್ಯ ಮುಖ್ಯಮಂತ್ರಿ ಶ್ರೀ. ಏಕನಾಥ ಶಿಂದೆ, ಮಾನ್ಯ ಗೃಹಸಚಿವ ಶ್ರೀ.ದೇವೇಂದ್ರ ಫಡ್ನವಿಸ್ ಇವರಲ್ಲಿ ಆಗ್ರಹಿಸಲಾಗಿದೆ. ಅದೇ ರೀತಿ ಮುಂಬಯಿ ಪೊಲೀಸ್ ಆಯುಕ್ತರು ಮತ್ತು ಶಿವ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ನಿರೀಕ್ಷಕರಿಗೂ ದೂರು ನೀಡಲಾಗಿದೆ. ಅಲ್ಲದೆ, ಷಣ್ಮುಖಾನಂದ ಸಭಾಂಗಣದ ವ್ಯವಸ್ಥಾಪಕರಿಗೂ ಮನವಿ ನೀಡಿ ಕಾರ್ಯಕ್ರಮ ರದ್ದುಗೊಳಿಸುವಂತೆ ಮನವಿ ಮಾಡಲಾಗಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !