
ಇತ್ತೀಚೆಗೆ ಮುಂಬಯಿನಲ್ಲಿ ಹಿಂದೂದ್ವೇಷಿ ಹಾಸ್ಯ ಕಲಾವಿದರಾದ ವೀರ ದಾಸ ಮತ್ತು ಮುನವ್ವರ್ ಫಾರೂಕಿ ಅವರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಎರಡೂ ಕಾರ್ಯಕ್ರಮಗಳನ್ನು ಹಿಂದೂ ಜನಜಾಗೃತಿ ಸಮಿತಿ ಸೇರಿದಂತೆ ವಿವಿಧ ಹಿಂದುತ್ವನಿಷ್ಠ ಸಂಘಟನೆಗಳು ಮತ್ತು ರಾಷ್ಟ್ರಪ್ರೇಮಿ ನಾಗರಿಕರು ಒಟ್ಟಾಗಿ ವಿರೋಧಿಸಿದರು. ಪರಿಣಾಮ ವೀರ ದಾಸ ಮತ್ತು ಮುನವ್ವರ್ ಫಾರೂಕಿ ಇವರಿಗೆ ಮುಂಬಯಿಂದ ಹಿಂತಿರುಗಿಹೋಗಬೇಕಾಯಿತು. ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಗೌರವಿಸಿ ಪೊಲೀಸ್ ಆಡಳಿತ ಮತ್ತು ಆಯೋಜಕರು ಈ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದಾಗಿ ಹಿಂದೂ ಜನಜಾಗೃತಿ ಸಮಿತಿಗೆ ತಿಳಿಸಿದ್ದಾರೆ, ಎಂದು ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ರಾಜ್ಯ ಸಂಘಟಕ ಶ್ರೀ. ಸುನೀಲ ಘನವಟ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ. ಘನವಟ ಇವರು ತಮ್ಮ ಮಾತನ್ನು ಮುಂದುವರೆಸುತ್ತಾ, ‘ಹಾಸ್ಯ’ದ ಹೆಸರಿನಲ್ಲಿ ನಿರಂತರವಾಗಿ ಹಿಂದೂ ದೇವತೆಗಳು ಮತ್ತು ಶ್ರದ್ಧಾಸ್ಥಾನಗಳ ಅವಹೇಳನೆ ಮಾಡುವುದು ಇತ್ತಿಚಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಕಲೆಯ ಸ್ವಾತಂತ್ರ್ಯ ಎಂದು ಕರೆಯಲಾಗುತ್ತದೆ. ಇದೇ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಕಲಾ ಸ್ವಾತಂತ್ರ್ಯದ ಬುರಖಾ ತೊಟ್ಟು ಹಿಂದೂದ್ವೇಷವನ್ನು ಹಬ್ಬಿಸಲಿಕ್ಕಿರುತ್ತದೆ, ಎಂಬುದೇ ಇದರಿಂದ ಗಮನಕ್ಕೆ ಬರುತ್ತದೆ. ಹಾಸ್ಯ ಮಾಡುತ್ತಾ ಸಮಾಜವನ್ನು ನಗಿಸಲು ಅದರಲ್ಲೂ ಹಿಂದೂ ಧರ್ಮದಲ್ಲಿನ ಆಚಾರ-ವಿಚಾರ, ಸಂಪ್ರದಾಯ, ಹಿಂದೂ ಸಂಸ್ಕೃತಿ, ಧಾರ್ಮಿಕ ಕೃತಿ, ಧರ್ಮಗ್ರಂಥಗಳು, ದೇವತೆಗಳು ಇತ್ಯಾದಿಗಳನ್ನು ‘ಹಾಸ್ಯ’ಕ್ಕೆ ಬಳಸಿಕೊಳ್ಳಲಾಗುತ್ತಿದೆ. ಇತರ ಧರ್ಮಗಳ ಶ್ರದ್ಧಾಸ್ಥಾನಗಳ ಬಗ್ಗೆ ಯಾರಾದರೂ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದರೆ, ಅವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳಲಾಗುತ್ತದೆ, ‘ಸರ್ ತನ್ ಸೆ ಜುದಾ’ದ ಬೆದರಿಕೆಗಳನ್ನು ನೀಡಲಾಗುತ್ತದೆ; ಆದರೆ ಹಿಂದೂಗಳ ಶ್ರದ್ಧಾಸ್ಥಾನಗಳನ್ನು ಯಾರೂ ಗೇಲಿ ಮಾಡುತ್ತಾರೆ. ಇದನ್ನು ಹಿಂದೂಗಳು ಎಷ್ಟು ದಿನ ಸಹಿಸಿಕೊಳ್ಳಬೇಕು ? ಇನ್ನು ಮುಂದೆ ಹಿಂದೂ ಸಮಾಜದ ಶ್ರದ್ಧಾಸ್ಥಾನಗಳ ಅವಮಾನ ಮಾಡುವುದನ್ನು ಸಹಿಸುವುದಿಲ್ಲ ಎಂದು ಹೇಳಿದರು.
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಶ್ರೀಭೂಮಿ (ಆಸಾಮ) ಯಲ್ಲಿನ ದೇವಸ್ಥಾನದ ಹುಂಡಿಯ ಮೇಲೆ ಕತ್ತರಿಸಿದ ಹಸುವಿನ ತಲೆ ಪತ್ತೆ !
‘ಕುರಿ ಕಡಿಯುತ್ತಿರುವುದನ್ನು ನೋಡಿದ್ದೀಯಾ ?’, ಎಂದು ಕೇಳುತ್ತಾ ಮುಸ್ಲಿಮರಿಂದ ಹಿಂದೂ ಯುವಕನ ಕೊಲೆ !
ಭಾಗ್ಯನಗರದಲ್ಲಿ ಬಕ್ರೀದ್ ಪ್ರಯುಕ್ತ ನಡೆದ ಪ್ರಾಣಿ ಹತ್ಯೆಯಿಂದಾಗಿ ಹಿಂದೂ ಕಾಲೋನಿಗಳ ರಸ್ತೆಗಳಲ್ಲಿ ಹರಿದ ನೆತ್ತರು ! : Blood On Streets
ಸರಕಾರವು ಸಾವರ್ಕರ್ ಸದನವನ್ನು ಸ್ವಾಧೀನಪಡಿಸಿಕೊಂಡು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು !