
ಮಂಗಳೂರಿನ ನಾಗೋರಿಯಲ್ಲಿ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬ್ಲಾಸ್ಟ್ ಪ್ರಕರಣದ ಹಿಂದೆ ಇಸ್ಲಾಮಿಕ್ ಜಿಹಾದಿಗಳ ಕೈವಾಡ ಇರುವುದು ಗಮನಕ್ಕೆ ಬರುತ್ತಿದೆ. ಈ ಪ್ರಕರಣವನ್ನು ಗಮನಿಸಿದಾಗ ಜಿಹಾದಿ ಶಕ್ತಿಗಳು ಸ್ಫೋಟ ಮಾಡಿಸಿ, ಅದನ್ನು ಹಿಂದೂಗಳ ಕೈಗೆ ಕಟ್ಟುವ ಷಡ್ಯಂತ್ರ್ಯ ಮಾಡುತ್ತಿರುವುದು ಗಮನಕ್ಕೆ ಬರುತ್ತಿದೆ. ಈ ಹಿಂದೆ ಮುಂಬಯಿನ ತಾಜ್ ಹೋಟೆಲ್ ಮೇಲೆ ಪಾಕ್ ಮೂಲದ ಇಸ್ಲಾಮಿಕ್ ಭಯೋತ್ಪಾದಕರು ದಾಳಿ ಮಾಡಿದಾಗ, ಅದರಲ್ಲಿನ ಭಯೋತ್ಪಾದಕ ಕಸಬ್ ಕೈಗೆ ಕೆಂಪುದಾರವನ್ನು ಕಟ್ಟಿ, ದಾಳಿಯ ಹಿಂದೆ ಹಿಂದೂಗಳ ಕೈವಾಡ ಇದೆಯೆಂದು ಬಿಂಬಿಸುವ ಪ್ರಯತ್ನ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಹ ಇಂತಹ ಷಡ್ಯಂತ್ರ್ಯವು ಗಮನಕ್ಕೆ ಬರುತ್ತಿದೆ. ದೇಶದಲ್ಲಿ ದೇಶ ವಿರೋಧಿ ಚಟುವಟಿಕೆ ಮಾಡುವ ಪಾಪ್ಯುಲರ್ ಪ್ರಂಟ್ ಆಫ್ ಇಂಡಿಯಾವನ್ನು ಕೇಂದ್ರ ಸರಕಾರವು ನಿಷೇಧ ಮಾಡಿದಾಗ, ಈ ನಿಷೇಧದ ವಿರುದ್ಧ ಪ್ರತಿಕಾರ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಲಾಗಿದ್ದು, ಅದರ ಮುಂದುವರೆದ ಭಾಗದಂತೆ ಈ ಸ್ಫೋಟ ಸಂಭವಿಸಿರುವುದು ಗಮನಕ್ಕೆ ಬರುತ್ತಿದೆ. ಕಳೆದ ತಿಂಗಳು ದೀಪಾವಳಿಯ ಸಂದರ್ಭದಲ್ಲಿ ಕೊಯಮತ್ತೂರಿದಲ್ಲಿ ಸಹ ಓರ್ವ ಭಯೋತ್ಪಾದಕ ಗ್ಯಾಸ್ ಮೂಲಕ ದೇವಸ್ಥಾನದ ಕಾರ್ಯಕ್ರಮದಲ್ಲಿ ಸ್ಫೋಟ ಮಾಡುವ ಉದ್ದೇಶದಿಂದ ಸಂಚು ರೂಪಿಸಿದ್ದನು. ತದನಂತರ ಅವನೇ ಗ್ಯಾಸ್ ಬಾಂಬ್ ಸ್ಫೋಟಕ್ಕೆ ಬಲಿಯಾದ ಘಟನೆ ನಡೆದಿದೆ. ಹಾಗಾಗಿ ಈ ಎರಡು ಪ್ರಕರಣಗಳಿಗೆ ಸಾಮ್ಯತೆ ಇದೆ. ಈ ಎಲ್ಲ ಘಟನೆಗಳನ್ನು ಗಮನಿಸಿದಾಗ ಜಿಹಾದಿ ಶಕ್ತಿಗಳು ದೇಶದಲ್ಲಿ ಹಿಂದೂಗಳ ವಿರುದ್ಧ ಬಹುದೊಡ್ಡ ಪ್ರಮಾಣದಲ್ಲಿ ಸ್ಫೋಟ ನಡೆಸಿ, ದೇಶವ್ಯಾಪಿ ವಿದ್ವಂಸಕ ಕೃತ್ಯ ಮಾಡಲು ಷಡ್ಯಂತ್ರ್ಯ ಮಾಡುತ್ತಿರುವುದು ಗಮನಕ್ಕೆ ಬರುತ್ತಿದೆ. ಈ ಎಲ್ಲ ಘಟನೆಗಳು ಅತ್ಯಂತ ಗಂಬೀರವಾಗಿವೆ. ದೇಶದಲ್ಲಿ ಹಿಂದೂಗಳ ಸುರಕ್ಷತೆಯ ದೃಷ್ಟಿಯಿಂದ ಇದರ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆಯನ್ನು ಮಾಡಬೇಕು, ಇದರ ಹಿಂದೆ ಯಾರ ಕುಮ್ಮಕ್ಕು ಇದೆ ? ಯಾರು ಹಣಕಾಸು ಸಹಾಯ ಮಾಡುತ್ತಾರೆ ? ಎಂಬ ಎಲ್ಲ ಅಂಶಗಳನ್ನು ಗಂಬೀರವಾಗಿ ತನಿಖೆ ಮಾಡುವುದು ಅಗತ್ಯವಾಗಿದೆ. ಅದಕ್ಕಾಗಿ ಈ ಪ್ರಕರಣವನ್ನು ಭಯೋತ್ಪಾದನಾ ಚಟುವಟಿಕೆಯೆಂದು ಪರಿಗಣಿಸಿ, ಶೀಘ್ರವಾಗಿ ತನಿಖೆಯನ್ನು ಮಾಡಿ, ಭಯೋತ್ಪಾದಕರಿಗೆ ಶಿಕ್ಷೆ ನೀಡಬೇಕೆಂಬ ಆಗ್ರಹವನ್ನು ಹಿಂದೂ ಜನಜಾಗೃತಿ ಸಮಿತಿಯು ಮಾಡುತ್ತದೆ.
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !