
ಮಥುರಾ: ಶ್ರೀ ಕೃಷ್ಣ ಜನ್ಮಭೂಮಿ ಪ್ರದೇಶದಲ್ಲಿರುವ ವಿವಾದಾತ್ಮಕ ಶಾಹಿ ಈದ್ಗಾ ಮಸೀದಿಯೊಳಗೆ ಪ್ರವೇಶಿಸಲು ಯತ್ನಿಸಿದ ಹಿಂದೂ ಮಹಾಸಭಾದ ನಾಯಕ ಸೌರಭ್ ಶರ್ಮಾ ಅವರನ್ನು ಬಂಧಿಸಲಾಗಿದೆ. ಶರ್ಮಾ ಮಸೀದಿಗೆ ಹೋಗಿ ಲಡ್ಡು ಗೋಪಾಲನ ವಿಗ್ರಹಕ್ಕೆ ಜಲಾಭಿಷೇಕ ಮಾಡಿ ಅಲ್ಲಿ ಹನುಮಾನ್ ಚಾಲೀಸಾವನ್ನು ಪಠಿಸಲಿದ್ದರು. ಸಹಾಯಕ ಪೊಲೀಸ್ ಅಧೀಕ್ಷಕ ಮಾರ್ತಾಂಡ್ ಪ್ರಕಾಶ್ ಸಿಂಗ್ ಮಾತನಾಡಿ, ಹಿಂದೂ ಮಹಾಸಭಾವು ಡಿಸೆಂಬರ್ ೬ ರಂದು ಮಸೀದಿಗೆ ಹೋಗಿ ಲಡ್ಡು ಗೋಪಾಲನ ವಿಗ್ರಹಕ್ಕೆ ಜಲಾಭಿಷೇಕ ಮತ್ತು ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಿಸಿತ್ತು ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ, ಹಿಂದೂ ಮಹಾಸಭಾದ ವಿವಿಧ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಎಂಟು ನಾಯಕರನ್ನು ಗೃಹಬಂಧನದಲ್ಲಿರಿಸಲಾಗಿದೆ. ಈ ಪ್ರಕರಣದಲ್ಲಿ, ಶ್ರೀ ಕೃಷ್ಣಜನ್ಮಭೂಮಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸ್ ಬಂದೋಬಸ್ತನ್ನು ಹೆಚ್ಚಿಸಲಾಗಿದೆ. ಶ್ರೀ ಕೃಷ್ಣಜನ್ಮಭೂಮಿಯ ಸುತ್ತಮುತ್ತಲಿನ ಸಂಚಾರವನ್ನು ಸಹ ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟರ್ಗಳನ್ನು ಪ್ರಸಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
An Akhil Bharat Hindu Mahasabha leader was arrested on Tuesday while allegedly going to recite Hanuman Chalisa at the Shahi Masjid Idgah on the Shri Krishna Janmabhoomi complex, officials saidhttps://t.co/BBNTyLTOcZ https://t.co/yEEokZ8SUX
— Economic Times (@EconomicTimes) December 6, 2022
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.