ಆಕ್ರೋಶಗೊಂಡ ಗ್ರಾಮಸ್ಥರಿಂದ ಪೊಲೀಸರ ಮೇಲೆ ಲಾಠಿ ಮತ್ತು ಕಬ್ಬಿಣದ ಸಲಾಕೆಯಿಂದ ದಾಳಿ

ಬಕ್ಸರ (ಬಿಹಾರ) – ಇಲ್ಲಿಯ ಉಷ್ಣ ವಿದ್ಯುತ್ ಸ್ಥಾವರದ ಸ್ಥಾಪನೆಗಾಗಿ ಭೂಮಿ ವಶಪಡಿಸಿಕೊಳ್ಳುವುದನ್ನು ವಿರೋಧಿಸುತ್ತಿರುವ ಗ್ರಾಮಸ್ಥರು ಪೊಲೀಸ್ ಮತ್ತು ಇಲ್ಲಿಯ ವಿದ್ಯುತ್ ಕೇಂದ್ರದ ಮೇಲೆ ಲಾಠಿ ಮತ್ತು ಕಬ್ಬಿಣದ ಸಲಾಕೆಯಿಂದ ದಾಳಿ ಮಾಡಿದರು. ಗ್ರಾಮಸ್ಥರು ಪೊಲೀಸರ ವಾಹನಗಳನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಈ ಸಮಯದಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಗುಂಪನ್ನು ಚದರಿಸಲು ಪ್ರಯತ್ನಿಸಿದರು. ಈ ಹಿಂಸಾಚಾರದಲ್ಲಿ ೪ ಪೊಲೀಸರು ಗಾಯಗೊಂಡರು. ಪ್ರಸ್ತುತ ಅಲ್ಲಿ ಹೆಚ್ಚಿನ ಪೊಲೀಸ ಬಂದೋಬಸ್ತು ಮಾಡಲಾಗಿದೆ.
बिहार के बक्सर जिले में थर्मल पावर प्लांट का मामला
जमीन अधिग्रहण के मुआवजे की मांग करने पर घरों में घुसकर बिहार पुलिस किसानों को बुरी तरह पीटा#BiharNews #socialmedia #viral2023 #thermalpowerplants @bihar_police @NitishKumar pic.twitter.com/uPhCPYOMe1— Dainik Bhaskar UP/UK (@dbupuk) January 11, 2023
ಕಳೆದ ೮೫ ದಿನಗಳಿಂದ ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ಜನವರಿ ೧೦ ರಂದು ಗ್ರಾಮಸ್ಥರು ಈ ಸ್ಥಾವರದ ಮುಖ್ಯ ಪ್ರವೇಶ ದ್ವಾರಕ್ಕೆ ಬಿಗ ಹಾಕಿ ಧರಣಿ ನಡೆಸಿದರು. ಆ ಸಮಯದಲ್ಲಿ ಪೊಲೀಸರು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ; ಆದರೆ ರಾತ್ರಿ ಪೊಲೀಸರು ಗ್ರಾಮಸ್ಥರ ಮನೆಗೆ ನುಗ್ಗಿ ಅವರನ್ನು ಥಳಿಸಿದ್ದಾರೆ. ಹಾಗೂ ೪ ಜನರನ್ನು ಬಂಧಿಸಿದ್ದಾರೆ. ಆದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಮರುದಿನ ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ.
लाठीचार्ज से भड़के किसान, बिहार के बक्सर जिले में किसानों ने पुलिस की गाड़ियों को फूंका.https://t.co/nN4dRGZJW2#Bihar #Buxar
— Jan Ki Baat (@jankibaat1) January 11, 2023
ಸಂಪಾದಕೀಯ ನಿಲುವುಪ್ರಜಾಪ್ರಭುತ್ವದ ಮಾರ್ಗದಿಂದ ವಿರೋಧ ವ್ಯಕ್ತಪಡಿಸುವ ಜನರಿಗೆ ಥಳಿಸಿದರೆ ಜನರು ಉದ್ವಿಗ್ನವಾದರೆ, ಅದನ್ನು ತಪ್ಪು ಎಂದು ಹೇಗೆ ಹೇಳಬಹುದು ? ಜನರನ್ನು ಥಳಿಸಿರುವ ಪೊಲೀಸರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ! |
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ