ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಮೇಲೆ ಭಯೋತ್ಪಾದಕರಿಂದ ಆತ್ಮಾಹುತಿ ದಾಳಿಯ ಸಂಚು !

ನವದೆಹಲಿ : ಗಣರಾಜ್ಯೋತ್ಸವದಂದು ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಭಯೋತ್ಪಾದಕ ದಾಳಿ ನಡೆಸಲು ಪಿತೂರಿ ನಡೆಸಲಾಗಿದೆ ಎಂಬುದು ಇತ್ತೀಚೆಗೆ ಬೆಳಕಿಗೆ ಬಂದಿರುವಾಗ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳು ಅಯೋಧ್ಯೆಯ ಶ್ರೀರಾಮಜನ್ಮಭೂಮಿಯಲ್ಲಿ ನಡೆಯುತ್ತಿರುವ ಶ್ರೀರಾಮ ಮಂದಿರದ ನಿರ್ಮಾಣ ಸ್ಥಳದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿವೆ ಎಂಬುದು ಈಗ ಬೆಳಕಿಗೆ ಬಂದಿದೆ. ಅವರು ಇಲ್ಲಿ ಆತ್ಮಾಹುತಿ ದಾಳಿ ನಡೆಸಲು ಆಯೋಜಿಸಿದ್ದಾರೆ. ಜೈಶ್-ಎ-ಮೊಹಮ್ಮದ್ ಈ ಭಯೋತ್ಪಾದಕ ಸಂಘಟನೆಯು ಈ ಪಿತೂರಿಯನ್ನು ರೂಪಿಸಿದೆ. ಇದಕ್ಕಾಗಿ, ಆತ್ಮಾಹುತಿ ಭಯೋತ್ಪಾದಕರು ನೇಪಾಳದ ಮೂಲಕ ಅಯೋಧ್ಯೆಗೆ ಹೋಗುವ ಸಾಧ್ಯತೆಯಿದೆ. ರಾಮ ಮಂದಿರ ನಿರ್ಮಾಣ ಕಾರ್ಯ ಶೇ. ೫೦ ರಷ್ಟು ಪೂರ್ಣಗೊಂಡಿದೆ.

ಸಂಪಾದಕೀಯ ನಿಲುವು

‘ಜಿಹಾದಿ ಭಯೋತ್ಪಾದನೆ ಯಾವಾಗ ಕೊನೆಗೊಳ್ಳುವುದು ?’, ಇದು ಅನೇಕ ವರ್ಷಗಳಿಂದ ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿ ಬರುವ ಪ್ರಶ್ನೆಯಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ಭಾರತವು ಪಾಕಿಸ್ತಾನವನ್ನು ನಾಶಪಡಿಸುವುದರೊಂದಿಗೆ ದೇಶದಲ್ಲಿನ ಮತಾಂಧರ ಜಿಹಾದಿ ಮನಸ್ಥಿತಿಯನ್ನು ನಾಶಪಡಿಸಬೇಕಾಗಿದೆ. ಇದಕ್ಕಾಗಿ ಸರಕಾರ ಪ್ರಯತ್ನಿಸಬೇಕು!