
ರಾಮನಾಥಿ (ಗೋವಾ) – ಸನಾತನ ಸಂಸ್ಥೆಯ ವತಿಯಿಂದ ಜನವರಿ ೨೦ ರಂದು ಕನ್ನಡ ಭಾಷೆಯಲ್ಲಿ ಉದ್ಯಮಿ ಸಾಧನಾ ಶಿಬಿರವು ಚೈತನ್ಯಮಯ ವಾತಾವರಣದಲ್ಲಿ ನೆರವೇರಿತು. ಶಿಬಿರವನ್ನು ಶಂಖನಾದದಿಂದ ಆರಂಭಿಸಲಾಯಿತು. ಅನಂತರ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲನ ಉದ್ಯಮಿ ಶ್ರೀ. ಎಂ.ಜೆ. ಶೆಟ್ಟಿ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ಸಮನ್ವಯಕರಾದ ಶ್ರೀ. ಗುರುಪ್ರಸಾದ ಗೌಡ (ಆಧ್ಯಾತ್ಮಿಕ ಮಟ್ಟ ಶೇ. ೬೫) ಇವರು ದೀಪಪ್ರಜ್ವಲನೆ ಮಾಡಿದರು. ಈ ಶಿಬಿರದಲ್ಲಿ ಕರ್ನಾಟಕ ರಾಜ್ಯದ ಬಾಗಲಕೋಟೆ, ಉಡುಪಿ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ಹೀಗೆ ವಿವಿಧ ಜಿಲ್ಲೆಗಳ ಉದ್ಯಮಿಗಳು ಪಾಲ್ಗೊಂಡಿದ್ದರು.
ಶ್ರೀ. ಶರತ ಕುಮಾರ ಮತ್ತು ಶ್ರೀ. ಚಂದ್ರ ಮೊಗೇರ (ಆಧ್ಯಾತ್ಮಿಕ ಮಟ್ಟ ಶೇ. ೬೦) ಇವರು ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಕಾರ್ಯದ ಪರಿಚಯವನ್ನು ಮಾಡಿಕೊಟ್ಟರು. ‘ಆನಂದಮಯ ಜೀವನಕ್ಕಾಗಿ ಅಧ್ಯಾತ್ಮ’ ಮತ್ತು ‘ಗುರುಕೃಪಾಯೋಗಾನುಸಾರ ಸಾಧನೆಯ ಮಹತ್ವ’ ಈ ವಿಷಯವನ್ನು ಶ್ರೀ. ಗುರುಪ್ರಸಾದ ಗೌಡ ಮತ್ತು ಸಮಿತಿಯ ಶ್ರೀ. ಅರುಣ ಕುಲಕರ್ಣಿಯವರು ಮಂಡಿಸಿದರು.
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !