ಉಡುಪಿಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹಿಂದೂ ರಾಷ್ಟ್ರಜಾಗೃತಿ ಸಭೆ

ಉಡುಪಿ – ‘ಅಲ್ಪಸಂಖ್ಯಾತರ ರಕ್ಷಣೆಗೆ ಸ್ವತಂತ್ರ ಭಾರತದಲ್ಲಿ ಅನೇಕ ಕಾನೂನುಗಳಿವೆ. ಆದರೆ, ಹಿಂದೂಗಳ ರಕ್ಷಣೆಗಾಗಿ ಯಾವುದೇ ಕಾನೂನುಗಳಿಲ್ಲ. ಹಿಂದುತ್ವವನ್ನು ಒಡೆಯುವ ಅಜೆಂಡಾದೊಂದಿಗೆ ಕಮ್ಯುನಿಸ್ಟರು, ಪ್ರಗತಿಪರರು ಹಾಗೂ ಇನ್ನೂ ಅನೇಕರು ಒಟ್ಟಾಗುತ್ತಿದ್ದಾರೆ. ವಿದೇಶಗಳಲ್ಲಿಯೂ ಹಿಂದುತ್ವವನ್ನು ಒಡೆಯುವ ಬಗ್ಗೆ ಚಿಂತನೆಗಳು ನಡೆಯುತ್ತಿವೆ. ನಾವೆಲ್ಲರೂ ಕೂಡಲೇ ಜಾಗೃತರಾಗಬೇಕು. ನಮ್ಮಲ್ಲಿ ಇಚ್ಛಾಶಕ್ತಿ ಮತ್ತು ಛಲವಿರಬೇಕು. ನಮ್ಮ ನಡುವೆ ಏನೇ ಭೇದಭಾವ ಇದ್ದರೂ ಮರೆತು, ಧರ್ಮರಕ್ಷಣೆಗಾಗಿ ಎಲ್ಲಾ ಸಂಘಟನೆಗಳು ಒಟ್ಟಾಗುವ ಸಂಕಲ್ಪ ಮಾಡಬೇಕು , ಎಂದು ‘ಭಾರತ ಸ್ವಾಭಿಮಾನ ಟ್ರಸ್ಟ್ನ ಚಿಕ್ಕಮಗಳೂರು ಜಿಲ್ಲಾ ಪ್ರಭಾರಿ ಹಾಗೂ ಯೋಗ ಶಿಕ್ಷಕರೂ ಆಗಿರುವ ಶ್ರೀ. ದಿವಾಕರ ಭಟ್ ಇವರು ಕರೆ ನೀಡಿದರು. ಅವರು ೨೬.೨.೨೦೨೩ ರಂದು ಹಿಂದೂ ಜನಜಾಗೃತಿ ಸಮಿತಿಯು ಉಡುಪಿಯಲ್ಲಿ ಆಯೋಜಿಸಿದ ಹಿಂದೂ ರಾಷ್ಟ್ರಜಾಗೃತಿ ಸಭೆಯಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಸನಾತನ ಸಂಸ್ಥೆಯ ಸೌ. ಲಕ್ಷ್ಮಿ ಪೈ, ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕರಾದ ಶ್ರೀ. ಗುರುಪ್ರಸಾದ ಗೌಡ ಇವರು ಮಾರ್ಗದರ್ಶನ ಮಾಡಿದರು. ಸುಮಾರು ೪೦೦ ಧರ್ಮಪ್ರೇಮಿಗಳು ಈ ವೇಳೆ ಉಪಸ್ಥಿತರಿದ್ದರು.
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಭಾರತದ ಮಹಾನ್ ಗಣಿತಜ್ಞ ‘ಆರ್ಯಭಟ’ ಅವರ ವಿಡಂಬನೆ; ಹಿಂದೂ ಜನಜಾಗೃತಿ ಸಮಿತಿಯಿಂದ ‘ಅಮೆಜಾನ್ ಇಂಡಿಯಾ’ಗೆ ಕಾನೂನು ನೋಟಿಸ್ !
ವಿವಾದಾತ್ಮಕ ‘ಈಠ್ಠಲಾ’ ನಾಟಕದಲ್ಲಿರುವ ಸಂತರ ಹೆಸರುಗಳು ಮತ್ತು ಆಕ್ಷೇಪಾರ್ಹ ಭಾಗಗಳನ್ನು ಕೈಬಿಡಿ!
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))