ಶ್ರೀನಗರದಲ್ಲಿ ೯ ವರ್ಷದ ಹುಡುಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಶಿಕ್ಷಕ ಅಬ್ದುಲ್ ವಹಿದ್ ನ ಬಂಧನ

ಶ್ರೀನಗರ – ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಓರ್ವ ೯ ವರ್ಷದ ಹುಡುಗಿಯ ಮೇಲೆ ಟ್ಯೂಷನ್ ಶಿಕ್ಷಕ ಅಬ್ದುಲ್ ವಹಿದ ನು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಸಂತ್ರಸ್ತ ಹುಡುಗಿಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿ ಅಬ್ದುಲ್ ವಹಿದನ ವಿರುದ್ಧ ‘ಪೋಕ್ಸೋ’ ಕಾನೂನಿನ ಅಡಿಯಲ್ಲಿ ದೂರು ದಾಖಲಿಸಿ ಅವನನ್ನು ಬಂಧಿಸಿದ್ದಾರೆ. ಪೊಲೀಸರು ಈ ಪ್ರಕರಣದ ಮುಂದಿನ ತನಿಖೆ ಮಾಡುತ್ತಿದ್ದಾರೆ.

ಫೆಬ್ರವರಿ ೨೦೨೩ ರಲ್ಲಿ ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿನ ಮೇರ ಇಲ್ಲಿಯೂ ಈ ಲೈಂಗಿಕ ದೌರ್ಜನ್ಯದ ಘಟನೆ ಬೆಳಕಿಗೆ ಬಂದಿತ್ತು. ಇಲ್ಲಿಯ ಸರಕಾರಿ ಶಾಲೆಯಲ್ಲಿನ ಶಿಕ್ಷಕ ಮಹಮ್ಮದ್ ತಾಜ್ ನಿಯಾಝಿ ಇವನ ಮೇಲೆ ಇಬ್ಬರು ವಿದ್ಯಾರ್ಥಿನಿಯರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಅದರ ನಂತರ ಅವನನ್ನು ಅಮಾನತುಗೊಳಿಸಿ ಬಂಧಿಸಲಾಗಿದೆ. ಅಷ್ಟೇ ಅಲ್ಲದೆ ಸಪ್ಟೆಂಬರ್ ೨೦೨೨ ರಲ್ಲಿ ದಕ್ಷಿಣ ಕಾಶ್ಮೀರದಲ್ಲಿನ ಪುಲ್ವಾಮಾ ಜಿಲ್ಲೆಯ ಒಂದು ಖಾಸಗಿ ಶಾಲೆಯ ಪ್ರಾಚಾರ್ಯ ಮಹಮ್ಮದ್ ಮುಕಬುಲ್ ಗನಿ ಇವನು ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬಲಾತ್ಕಾರ ಮಾಡಿರುವ ಆರೋಪದಲ್ಲಿ ಬಂಧಿಸಲಾಗಿತ್ತು.

ಸಂಪಾದಕೀಯ ನಿಲುವು

ಕಾಮುಕ ಮತಾಂಧ !