ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಸುನಿಲ ಘನವಟ ಇವರಿಂದ ಮುಖ್ಯಮಂತ್ರಿ ಏಕನಾಥ ಶಿಂದೆ ಇವರಿಗೆ ಮನವಿ

ಮುಂಬಯಿ, ಮಾರ್ಚ್ ೨೩ (ವಾರ್ತೆ) – ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಕೋಟ್ಯಾಂತರ ರೂಪಾಯಿಯ ಭ್ರಷ್ಟಾಚಾರದ ಪ್ರಕರಣ ಮುಚ್ಚಿ ಹಾಕುವ ಸರಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಹಾಗೂ ದೇವಸ್ಥಾನದಲ್ಲಿ ಭ್ರಷ್ಟಾಚಾರ ನಡೆಸಿದ ತಪ್ಪಿತಸ್ತರ ಮೇಲೆ ದೂರು ದಾಖಲಿಸಿ ತನಿಖಾ ಇಲಾಖೆಯಿಂದ (‘ಸಿ ಐಡಿ’ಯ) ವರದಿಯ ಪ್ರಕಾರ ದೂರು ದಾಖಲಿಸಬೇಕು, ಈ ಬೇಡಿಕೆಗಳ ಮನವಿ ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ಮತ್ತು ಛತ್ತೀಸ್ಗಢ ರಾಜ್ಯದ ಸಂಘಟಕ ಶ್ರೀ. ಸುನಿಲ ಘನವಟ ಇವರು ಮುಖ್ಯಮಂತ್ರಿ ಏಕನಾಥ ಶಿಂದೆ ಇವರಿಗೆ ನೀಡಿದರು. ಈ ಸಮಯದಲ್ಲಿ ಮುಖ್ಯಮಂತ್ರಿಗಳ ಜೊತೆ ಶಿವಸೇನೆಯ ಪಕ್ಷದ ಪ್ರತೋದ ಭಾರತಶೇಠ ಗೊಗಾವಲೆ, ಮಾಜಿ ಸಚಿವ ಮಹಾದೇವ ಜಾನಕರ ಇವರು ಸಹ ಉಪಸ್ಥಿತರಿದ್ದರು. ಈ ಪ್ರಕರಣದ ಗಾಂಭೀರ್ಯ ಗಮನಕ್ಕೆ ತೆಗೆದುಕೊಂಡು ಮುಖ್ಯಮಂತ್ರಿ ಏಕನಾಥ ಶಿಂದೆ ಇವರು ಈ ಪ್ರಕರಣದ ಎಲ್ಲ ಮಾಹಿತಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಮಯದಲ್ಲಿ ಖಾಸಗಿ ಬಸ್ಸಿನ ಸ್ಥಳೀಯ ಟಿಕೆಟ್ ಮಾರಾಟಗಾರರು ಹಾಗೂ ಆನ್ಲೈನ್ ನಲ್ಲಿ ನಿಯಮ ಉಲ್ಲಂಘಿಸಿ ಹೆಚ್ಚಿನ ಬೆಲೆಯ ಟಿಕೆಟದರ ನಿಯಂತ್ರಣ ಮಾಡಬೇಕು, ಈ ಬೇಡಿಕೆಯ ಮನವಿ ಕೂಡ ನೀಡಿದರು. ಇದರ ಬಗ್ಗೆ ಮುಖ್ಯಮಂತ್ರಿಗಳು ಗಮನ ಹರಿಸಿ ಮುಂದಿನ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!