
ವಾಶಿಂಗ್ಟನ್ (ಅಮೇರಿಕಾ) – ಅಮೇರಿಕಾದಲ್ಲಿ ಇತ್ತೀಚೆಗೆ ಭಾರತೀಯ ರಾಯಭಾರ ಕಚೇರಿಯ ಸ್ಥಳದಲ್ಲಿ ನಡೆದ ಹಿಂಸಾಚಾರವನ್ನು ನಾವು ಖಂಡಿಸುತ್ತೇವೆ. ನಾವು ಪ್ರತಿಭಟನೆ ನಡೆಸುವವರ ಅಧಿಕಾರವನ್ನು ಬೆಂಬಲಿಸುತ್ತೇವೆ; ಆದರೆ ಹಿಂಸೆ ಅಥವಾ ಹಿಂಸೆಯಿಂದ ಎದುರಾಗುವ ಅಪಾಯವನ್ನು ಎಂದಿಗೂ ಬೆಂಬಲಿಸುವುದಿಲ್ಲವೆಂದು ಅಮೇರಿಕಾದ ವಿದೇಶಾಂಗ ಇಲಾಖೆಯ ಸಹಾಯಕ ವಕ್ತಾರ ವೇದಾಂತ ಪಟೇಲ ಇವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅಮೇರಿಕಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಭಾರತೀಯ ರಾಯಭಾರ ಕಚೇರಿಯ ಮೇಲೆ ಖಲಿಸ್ತಾನಿಗಳು ನಡೆಸಿದ ದಾಳಿಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸುವಾಗ ಪಟೇಲರು ಮೇಲಿನಂತೆ ಹೇಳಿದರು. ಭಾರತವು ಈ ದಾಳಿಯ ಬಗ್ಗೆ ಅಮೇರಿಕಾದ ಬಳಿ ನಿಷೇಧವನ್ನು ವ್ಯಕ್ತಪಡಿಸಿತ್ತು.
ಸಂಪಾದಕೀಯ ನಿಲುವುಅಮೇರಿಕಾ ಕೇವಲ ಬಾಯಿಮಾತಿನಲ್ಲಿ ಖಂಡಿಸದೇ ದಾಳಿ ನಡೆಸಿದ ಹಾಗೂ ಭಾರತದ ವಿರುದ್ಧ ಚಟುವಟಿಕೆ ನಡೆಸಿರುವ ಖಲಿಸ್ತಾನಿಗಳ ಮೇಲೆ ಕ್ರಮ ಕೈಗೊಂಡು ಅವರನ್ನು ಜೈಲಿಗಟ್ಟಬೇಕು ! |
ಅಮೆರಿಕಾ ೧೮ ಸಾವಿರ ಭಾರತೀಯ ನಾಗರಿಕರನ್ನು ದೇಶದಿಂದ ಹೊರಹಾಕಲಿದೆ !
ಇರಾನ್ ದಾಳಿ; ಜೋರ್ಡಾನ್ನಲ್ಲಿದ್ದ ಇಬ್ಬರು ಅಮೆರಿಕನ್ ಸೈನಿಕರ ಸಾವು – ಅಮೆರಿಕ ತಿರುಗೇಟು !
ದಕ್ಷಿಣ ಆಫ್ರಿಕಾದಲ್ಲಿ ೧೭ ಸಾವಿರ ಹಿಂದೂಗಳಿಂದ ಒಂದೆಡೆ ಸೇರಿ ಹನುಮಾನ್ ಚಾಲೀಸಾ ಪಠಣ!
ಹೋರ್ಮುಜ್ ಜಲಸಂಧಿಯಲ್ಲಿ ಎರಡು ತೈಲ ಟ್ಯಾಂಕರ್ಗಳಲ್ಲಿ ಸ್ಫೋಟ : Hormuz Oil Tanker Explosion
ಬುಲೆಟ್ ಟ್ರೇನ ಯೋಜನೆ ವಿಳಂಬಕ್ಕೆ ಭಾರತೀಯ ಸಚಿವರ ನಡವಳಿಕೆಯೇ ಕಾರಣ
ದೇಶದ ಮೊದಲ ಖಾಸಗಿ ಸಂಸ್ಥೆಯಿಂದ ಉಪಗ್ರಹಗಳ ಯಶಸ್ವಿ ಉಡಾವಣೆ