‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುವೆ !’ (ಅಂತೆ)

  • ತಮಿಳುನಾಡಿನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಣಿಕಂದನ್ ನಿಂದ ಬೆದರಿಕೆ !

  • ಪೊಲೀಸರಿಂದ ಮಣಿಕಂದನ್‌ರವರ ವಿರುದ್ಧ ದೂರು ದಾಖಲು !

ಚೆನ್ನೈ (ತಮಿಳುನಾಡು) – ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿಗೆ ೨ ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುವೆ’ ಎಂದು ತಮೀಳುನಾಡಿನ ಡಿಂಡುಗಲ್ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷ ಮಣಿಕಂದನ್ ಇವರು ಬೆದರಿಕೆ ಹಾಕಿದ್ದಾರೆ, ಈ ಪ್ರಕರಣದಲ್ಲಿ ಮಣಿಕಂದನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

(ಸೌಜನ್ಯ – TIMES NOW)

ಸೂರತ್ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಚ್. ವರ್ಮಾ ಇವರು ರಾಹುಲ್ ಗಾಂದಿಗೆ ಮೋದಿ ಉಪನಾಮಕ್ಕೆ ಮಾನಹಾನಿ ಮಾಡಿದ ಪ್ರಕರಣದಲ್ಲಿ ೨ ವರ್ಷ ಜೈಲು ಶಿಕ್ಷೆ ವಿಧಿಸಿದ್ದು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ.

ಸಂಪಾದಕೀಯ ನಿಲುವು

ಇಂತಹ ಪದಾಧಿಕಾರಿಗಳನ್ನು ಹೊಂದಿರುವ ಕಾಂಗ್ರೆಸ್ ಪಕ್ಷ ಕಾನೂನು ಸುವ್ಯವಸ್ಥೆ ನೀಡಲು ಸಾಧ್ಯವೇ ?