ಕನ್ಯಾಕುಮಾರಿ (ತಮಿಳುನಾಡು)ಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅಪರಿಚಿತ ವ್ಯಕ್ತಿಗಳಿಂದ ಧ್ವಂಸ !

ಆಕ್ರೋಶಗೊಂಡ ನಾಗರಿಕರಿಂದ ಪ್ರತಿಭಟನೆ

ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅಪರಿಚಿತ ವ್ಯಕ್ತಿಗಳಿಂದ ಧ್ವಂಸ !

ಕನ್ಯಾಕುಮಾರಿ (ತಮಿಳುನಾಡು) – ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಯನ್ನು ಅಪರಿಚಿತ ವ್ಯಕ್ತಿಗಳು ಧ್ವಂಸಗೊಳಿಸಿದ್ದಾರೆ. ಏಪ್ರಿಲ್ ೯ ರ ರಾತ್ರಿ ಈ ವಿಧ್ವಂಸಕ ಕೃತ್ಯವನ್ನು ನಡೆಸಲಾಯಿತು. ನಂತರ ಆಕ್ರೋಶಗೊಂಡ ನಾಗರಿಕರು ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ಕನ್ಯಾಕುಮಾರಿಯಲ್ಲಿನ ಪೊಲೀಸ್ ಅಧೀಕ್ಷಕ ಹರಿ ಕೃಷ್ಣ ಪ್ರಸಾದ ಇವರು, ಪುತ್ತಳಿಯನ್ನು ಧ್ವಂಸ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬುದು ನಮಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. ಪುತ್ತಳಿಗೆ ಸ್ವಲ್ಪ ಹಾನಿಯಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಒಂದು ತಂಡ ರಚಿಸಿದ್ದೇವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಜಾಗೃತರಾಗುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

 

ಸಂಪಾದಕೀಯ ನಿಲುವು

ಇಂತಹ ಘಟನೆಗಳು ಪೊಲೀಸರಿಗೆ ನಾಚಿಕೆಗೇಡಿನ ಸಂಗತಿ !