ಗೌರಿ ಲಂಕೇಶ್ ಪ್ರಕರಣ ನಡೆಸುತ್ತಿರುವ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮನವಿ !

ಹಿಂದೂ ಜನಜಾಗೃತಿ ಸಮಿತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮನವಿ !

ಈ ಸಂದರ್ಭದಲ್ಲಿ (ಬಲಗಡೆಯಿಂದ) ಹಿಂದೂ ಮಹಾಸಭಾದ ಶ್ರೀ ಲೋಕೇಶ್ ಉಳ್ಳಾಲ, ಶ್ರೀ ಗಣೇಶ್ ಸಾಲಿಯನ್, ಶ್ರೀ ಉಮೇಶ್ ಆಚಾರ್ಯ ಮರಕಡ, ಶ್ರೀ ಶಶಿಧರ್ ಬಾಳಿಗ, ದಕ್ಷಿಣ ಕನ್ನಡ ಜಿಲ್ಲೆಯ ಸಮಿತಿ ಸಮನ್ವಯಕರಾದ ಸೌ. ಪವಿತ್ರ ಕುಡ್ವ, ಶ್ರೀ ಸುರೇಶ್ ಪಡುಕೋಣಾಜೆ, ಉದ್ಯಮಿ ಶ್ರೀ ಭಾಸ್ಕರ್ ಕೋಲ್ನಾಡ್ , ಶ್ರೀ ಬಾಲಗಂಗಾಧರ್ ಕೋಡಿಕಲ್, ವಿಶ್ವ ಹಿಂದೂ ಪರಿಷತ್ತಿನ ಶ್ರೀ ದಿನೇಶ್, ಶ್ರೀ ಸುಧಾಕರ್ ಆಚಾರ್ಯ

ಮಂಗಳೂರು : ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಮೊನ್ನೆ ಬುಧವಾರ ರಾತ್ರಿ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದೆ. ನ್ಯಾಯವಾದಿ ಕೃಷ್ಣಮೂರ್ತಿ ಅವರು ವಿಶ್ವ ಹಿಂದೂ ಪರಿಷತ್ತಿನ ಸಭೆ ಮುಗಿಸಿ ತಮ್ಮ ಕಾರಿನಲ್ಲಿ ಚೆಟ್ಟಳ್ಳಿಯಿಂದ ಮಡಿಕೇರಿಗೆ ಹೊರಡುತ್ತಿದ್ದರು. ಈ ವೇಳೆ ಅವರ ಮೇಲೆ ದಾಳಿ ನಡೆದಿದೆ. ಈ ಹೇಡಿತನದ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ದಾಳಿಯ ಹಿಂದೆ ಪಿ.ಎಫ್.ಐ ಅಥವಾ ನಕ್ಸಲ್‌ವಾದಿಗಳ ಕೈವಾಡವಿದೆಯೇ ಎಂದು ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ರವಿಕುಮಾರ್ ಎಮ್. ಆರ್. ಇವರಿಗೆ ಮನವಿಯನ್ನು ನೀಡಲಾಯಿತು.