ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಅಧಿಕಾರಿಗಳಿಗೆ ಮನವಿ !

ಬೆಂಗಳೂರು : ವಿನಯ ಪಂಪಾಪತಿ ಮತ್ತು ವಿಕಾಸ ಪಂಪಾಪತಿ ನಿರ್ದೇಶನದ ಹಾಗೂ ಅಮ್ರೆಜ್ ಸೂರ್ಯವಂಶಿ ನಿರ್ಮಾಣದ ‘ರಾಮನ ಅವತಾರ’ ಎಂಬ ಕನ್ನಡ ಚಲನಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅದರಲ್ಲಿ ಕೋಟ್ಯಾಂತರ ಹಿಂದೂಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀ ರಾಮಚಂದ್ರನ ಚಾರಿತ್ರ್ಯಕ್ಕೆ ಕಳಂಕ ಬರುವಂತೆ ಚಿತ್ರಿಸಲಾಗಿದೆ. ರಾವಣನ ವಾಹನ ಪುಷ್ಪಕ ವಿಮಾನವನ್ನು ಐ ೨೦ ಕಾರು ಎಂದು ಲೇವಡಿ ಮಾಡಲಾಗಿದೆ. ಸೀತಾಮಾತೆ, ಭಗವಾನ್ ಶ್ರೀಕೃಷ್ಣ ಪರಮಾತ್ಮ ಹೀಗೆ ಅನೇಕ ರಾಮಾಯಣ, ಮಹಾಭಾರತದ ಪಾತ್ರಗಳನ್ನು, ಸನ್ನಿವೇಶಗಳನ್ನು ಅಪಹಾಸ್ಯ ಮಾಡಲಾಗಿದೆ. ಈ ರೀತಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ದೃಶ್ಯಗಳನ್ನು ತೆಗೆದು ಹಾಕಬೇಕು ಮತ್ತು ಈ ಸಿನಿಮಾದ ಸೆನ್ಸಾರ್ ಪ್ರಮಾಣಪತ್ರವನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಅಧಿಕಾರಿಗಳಿಗೆ ಮನವಿ ನೀಡಲಾಯಿತು. ಈ ಸಂಧರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ್ ಗೌಡ, ಸಾಮಾಜಿಕ ಹೋರಾಟಗಾರ ಶ್ರೀ. ರಂಗನಾಥ್, ವಿಶ್ವ ಹಿಂದೂ ಪರಿಷತ್ನ ಶ್ರೀ. ತಿರುಪತಿ ಬಾಬು, ಶ್ರೀ. ಸಂತೋಷ್ ಕಡ್ತಳ, ರಮ್ಯಾ ಕಡ್ತಳ, ಶ್ರೀ. ಪ್ರಶಾಂತ್ ಶಾನಭಾಗ್, ಶ್ರೀ. ರಂಜಿತ್ ಬಿ.ಆರ್, ಶ್ರೀ. ಪಾಲಾಕ್ಷ ಬಿ, ಶ್ರೀ. ಹರ್ಷ ಮತ್ತಿತರ ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಶ್ರೀ. ಮೋಹನ್ ಗೌಡ ಮಾತನಾಡಿ, ಇಂದು ಕೇವಲ ಭಾರತದಲ್ಲಷ್ಟೇ ಅಲ್ಲದೆ ನಾನಾ ದೇಶಗಳಲ್ಲಿ ಪ್ರಭು ಶ್ರೀರಾಮನನ್ನು ಅವರ ಗುಣಗಳಿಗೆ ಪೂಜಿಸಲಾಗುತ್ತದೆ. ಹೀಗಿರುವಾಗ ಈ ಚಿತ್ರದಲ್ಲಿ ರಾಮನ ಅವತಾರ ರಘುಕುಲ ಸೋಮನ ಅವತಾರ ಎಂದು ಉಲ್ಲೇಖಿಸಿ ಚಿತ್ರದ ನಾಯಕ ಮದ್ಯ ಸೇವಿಸುವುದು, ದುಷ್ಚಟಗಳಿಗೆ ದಾಸನಾಗಿರುವುದನ್ನು ತೋರಿಸಲಾಗಿದೆ. ಅಷ್ಟೇ ಅಲ್ಲದೇ ಪ್ರಭು ಶ್ರೀರಾಮನ ವೇಷವನ್ನು ನಾಯಕನಿಗೆ ತೊಡಿಸಿ ಪೊಲೀಸರು ಶ್ರೀರಾಮನನ್ನು ಅಟ್ಟಾಡಿಸುವಂತೆ ಮತ್ತು ಹೊಡಿಯುವಂತೆ ತೋರಿಸಲಾಗಿದೆ. ಕೀಳುಮಟ್ಟದ ಸಿನಿಮಾ ಪ್ರಚಾರಕ್ಕಾಗಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡಲಾಗಿದೆ. ಇದು ಭಾರತೀಯ ದಂಡ ಸಂಹಿತೆ ೨೯೫, ೨೯೮ ಮತ್ತು ೨೯೫ ಎ ಪ್ರಕಾರ ಗಂಭೀರ ಅಪರಾಧವಾಗಿದೆ. ಅದಲ್ಲದೇ ಸಿನಿಮಾಟೋಗ್ರಾಫ್ ಆಕ್ಟ್ ೧೯೫೨ ನ ಕಲಂ ೫ ಬಿ ಪ್ರಕಾರ ಇದು ಸೆನ್ಸಾರ್ ಮಂಡಳಿ ನಿಯಮದ ಉಲ್ಲಂಘನೆಯಾಗಿದೆ. ಹಾಗಾಗಿ ಈ ಸಿನಿಮಾದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ದೃಶ್ಯಗಳನ್ನು ತೆಗೆದು ಹಾಕಬೇಕು ಮತ್ತು ಈ ಸಿನಿಮಾದ ಸೆನ್ಸಾರ್ ಪ್ರಮಾಣಪತ್ರವನ್ನು ಕೂಡಲೇ ರದ್ದು ಮಾಡಬೇಕೆಂದು ಆಗ್ರಹಿಸಲಾಯಿತು.
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ