ಮೊಮ್ಮಗನಿಗೆ ಕನ್ನಡ ಕಲಿಸಲು ಮರೆತರಾ ಸಿದ್ಧರಾಮಯ್ಯ ? ಎಂದು ನೆಟಿಗರ ಪ್ರಶ್ನೆ

ಬೆಂಗಳೂರು – ಸದ್ಯ ಕರ್ನಾಟಕದಲ್ಲಿ ಸಾರ್ವತ್ರಿಕ ಚುನಾವಣೆಯು ರಂಗೇರಿದ್ದು ಎಲ್ಲೆಡೆ ಅದರದ್ದೇ ಚರ್ಚೆ ನಡೆಯುತ್ತಿದೆ. ಅದರಲ್ಲಿಯೂ ಅನೇಕ ಸಂಗತಿಗಳು ಚರ್ಚೆಗೆ ಗ್ರಾಸವಾಗಿದೆ. ಅದರಲ್ಲಿಯೇ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಮೊಮ್ಮಗನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಸಂಸತ್ತಿನ ಕಲಾಪವೊಂದರಲ್ಲಿ `ಈಗಿನ ಕಾಲದ ಜನರಿಗೆ ಕನ್ನಡ ವ್ಯಾಕರಣದ ಕನಿಷ್ಟ ಜ್ಞಾನವೂ ಇರುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಟೀಕಿಸಿದ್ದರು. ಮಕ್ಕಳಿಗೆ ಕನ್ನಡ ಭಾಷೆಯ ಸಂಪೂರ್ಣ ಅರಿವು ಇರದಿರುವುದು ಖೇದಕರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
(ಸೌಜನ್ಯ : News18 Kannada)
ಆದರೆ, ವಿಪರ್ಯಾಸವೆಂದರೆ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್ ರಾಕೇಶ್ ಅವರಿಗೇ ಕನ್ನಡ ಭಾಷೆ ಸರಿಯಾಗಿ ಬರುವುದಿಲ್ಲ. ವರುಣಾ ಕ್ಷೇತ್ರದಲ್ಲಿ ತಾತನ ಜೊತೆ ಚುನಾವಣಾ ಪ್ರಚಾರಕ್ಕೆ ಇಳಿದ ರಾಕೇಶ್, ಮಾಧ್ಯಮದವರು ಕೇಳಿದ ಕೆಲವು ಪ್ರಶ್ನೆಗಳಿಗೆ ಸಾಮಾನ್ಯ ಕನ್ನಡದಲ್ಲಿಯೂ ಉತ್ತರಿಸಲಾಗದೆ ಒದ್ದಾಡುತ್ತಿರುವುದು ಒಂದು ವಿಡಿಯೋದಲ್ಲಿ ನೋಡಬಹುದಾಗಿದೆ. ಅದರಲ್ಲಿ ಕನ್ನಡಕ್ಕಿಂತ ಆಂಗ್ಲದಲ್ಲಿಯೇ ಮಾತನಾಡುವುದು ಕಾಣಿಸುತ್ತಿದೆ. ಕನ್ನಡ ಪಾಠ ಮಾಡುವ ಸಿದ್ದರಾಮಯ್ಯನವರು ಮಗನಿಗೆ ಕನ್ನಡ ಕಲಿಸಲಿಲ್ಲವೇ? ಎಂದೆಲ್ಲ ಟೀಕೆಯಾಗುತ್ತಿದೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ