ಸಮಸ್ಯೆ ಹೇಳಿಕೊಂಡ ಯುವಕನಿಗೆ ಕಪಾಳ ಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ !

ಕಾಂಗ್ರೆಸ್ ನಾಯಕ ಎಂ ಬಿ ಪಾಟೀಲ್

ಬೆಂಗಳೂರು : ಕಾಂಗ್ರೆಸ್ ನಾಯಕ ಎಂ ಬಿ ಪಾಟೀಲ್ ಸಭೆಯಲ್ಲಿ ಯುವಕನೋರ್ವನಿಗೆ ಕೆನ್ನೆಗೆ ಹೊಡೆದ ಘಟನೆ ಬಿಜಾಪುರ ಜಿಲ್ಲೆಯ ಬಬಲೇಶ್ವರದ ದೇವಾಪೂರ ಗ್ರಾಮದಲ್ಲಿ ನಡೆದಿದೆ. ಇದರವಿಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.

ಮೂಲಗಳ ಪ್ರಕಾರ ದೇವಾಪೂರ ಗ್ರಾಮದ ವ್ಯಕ್ತಿಯೋರ್ವ ಶನಿವಾರ ನಡೆದ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ತನ್ನ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯ ಮಾಡದೇ ಇರುವುದರ ಬಗ್ಗೆ ಪ್ರಶ್ನಿಸಿದ್ದಕ್ಕೆ ಕುಪಿತಗೊಂಡ ಕಾಂಗ್ರೆಸ್ ನಾಯಕ ಎಮ್ ಬಿ ಪಾಟೀಲರು ಯುವಕನೋರ್ವನ ಕೆನ್ನೆಗೆ ಹೊಡೆದಿದ್ದಾರೆ ಮತ್ತು ಥಳಿಸಿದ್ದಾರೆ. ಈ ಬಗ್ಗೆ ಬಿಜೆಪಿಯು ಪ್ರತಿಕ್ರಿಯೆಸುತ್ತಾ ಕುಂದು ಕೊರತೆಗಳನ್ನು ಹೇಳಿಕೊಂಡ ವ್ಯಕ್ತಿಯ ಮೇಲೆ ಕಾಂಗ್ರೆಸ್ ಗೂಂಡಾಗಿರಿಯನ್ನು ಪ್ರದರ್ಶಿಸಿದೆ ಮತ್ತು ಗೂಂಡಾಗಿರಿ ಕಾಂಗ್ರೆಸ್ನ ಡಿಎನ್ಎಯಲ್ಲಿದೆ ಎಂದು ಟೀಕಿಸಿದೆ.