ಸೇನೆಯ ಮೇಲೆ ನಮಗೆ ಸಂಪೂರ್ಣ ನಂಬಿಕೆ – ರಾಹುಲ ಗಾಂಧಿ

ಜಮ್ಮೂ- ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಹ ಇವರು 2016 ರಲ್ಲಿ ಭಾರತೀಯ ಸೈನ್ಯ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ `ಸರ್ಜಿಕಲ್ ಸ್ಟ್ರೈಕ್’ ಮೇಲೆ ಸಂಶಯವನ್ನು ವ್ಯಕ್ತಪಡಿಸುವ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಸ್ಪಷ್ಟೀಕರಣ ನೀಡಿದೆ. ಈ ವಿಷಯದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ ಗಾಂಧಿಯವರು ಮಾತನಾಡುತ್ತಾ, ದಿಗ್ವಿಜಯ ಸಿಂಹ ಇವರು `ಸರ್ಜಿಕಲ್ ಸ್ಟ್ರೈಕ್’ ಬಗ್ಗೆ ನೀಡಿರುವ ಹೇಳಿಕೆಯ ಬಗ್ಗೆ ನಾನು ಅಸಧಾನವನ್ನು ವ್ಯಕ್ತಪಡಿಸುತ್ತೇನೆ. ನನಗೆ ನಮ್ಮ ಸೈನ್ಯದ ಮೇಲೆ ಸಂಪೂರ್ಣ ನಂಬಿಕೆ ಇದೆ. ಸೈನ್ಯವು ಏನು ಮಾಡಿದರೂ, ಅದಕ್ಕೆ ಸಾಕ್ಷಿ ನೀಡುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.
ದಿಗ್ವಿಜಯ ಸಿಂಹ ಇವರು `ಭಾರತ ಜೊಡೊ’ ಯಾತ್ರೆಯಲ್ಲಿ, `ಸರಕಾರ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬಗ್ಗೆ ಸಾಕ್ಷಿಗಳನ್ನು ಇದುವರೆಗೂ ಕೊಟ್ಟಿಲ್ಲ’, ಎಂದು ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯಿಂದ ವಿವಾದ ನಿರ್ಮಾಣವಾದಾಗ ಸಿಂಹ ಇವರು` ನಾವು ಭಾರತೀಯ ಸೈನ್ಯವನ್ನು ಗೌರವಿಸುತ್ತೇವೆ ಮತ್ತು ಅವರು ನಮಗೆ ಸರ್ವಸ್ವವಾಗಿದ್ದಾರೆ’ ಎಂದು ಯೂ-ಟರ್ನ ಮಾಡಿದರು.
ಸಂಪಾದಕರ ನಿಲುವುಭಾರತೀಯ ಸೈನ್ಯ ನಡೆಸಿದ್ದ `ಸರ್ಜಿಕಲ್ ಸ್ಟ್ರೈಕ್’ ಬಗ್ಗೆ ಸಂಶಯವನ್ನು ವ್ಯಕ್ತಪಡಿಸಿದ್ದ ದಿಗ್ವಿಜಯ ಸಿಂಹ ಇವರ ಮೇಲೆ ಪಕ್ಷವು ಯಾವ ಕ್ರಮವನ್ನು ಕೈಕೊಳ್ಳಲಿದೆ?’ ಎನ್ನುವುದನ್ನೂ ಕಾಂಗ್ರೆಸ್ಸಿಗರು ಜನತೆಗೆ ತಿಳಿಸಬೇಕು ! |
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim
ರಾಜಕೀಯ ಮಾಡಬೇಕೆಂದರೆ, ಸಮವಸ್ತ್ರ ಕಳಚಿ ಚುನಾವಣೆಯಲ್ಲಿ ಭಾಗವಹಿಸಿ! : Maulana Fazlur Rehman
‘ವಿಶ್ವಸಂಸ್ಥೆಯ ಠರಾವಿನಂತೆ ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಬೇಕಂತೆ!’