
ಶೇವಗಾಂವ್ (ಜಿಲ್ಲಾ ನಗರ) – ಮೇ 14 ರಂದು ಛತ್ರಪತಿ ಸಂಭಾಜಿ ಮಹಾರಾಜರ ಜಯಂತಿಯಂದು ಶೇವಗಾಂವ್ ನಗರದಲ್ಲಿ ನಡೆದ ಮೆರವಣಿಗೆಯಲ್ಲಿ ಮೆರವಣಿಗೆ ಮತ್ತು ಪ್ರಾರ್ಥನಾ ಸ್ಥಳದ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಸಮೂಹವು ಅಂಗಡಿಗಳು ಮತ್ತು ವಾಹನಗಳನ್ನು ಹಾನಿಗೊಳಿಸಿತು ಮತ್ತು ಕೆಲವುಕಡೆಗಳಲ್ಲಿ ಬೆಂಕಿ ಹಚ್ಚಲಾಯಿತು. ಪೊಲೀಸರಿಗೆ ಲಾಠಿಚಾರ್ಜ್ ಮಾಡಬೇಕಾಯಿತು. ಈ ಎಲ್ಲಾ ಪ್ರಕರಣಗಳಲ್ಲಿ 4 ಪೊಲೀಸರು ಗಾಯಗೊಂಡಿದ್ದಾರೆ. ಮುಂದಿನ 4 ದಿನಗಳ ಕಾಲ ಸಭೆ-ಸಮಾರಂಭಗಳ ಮೇಲೆ ನಿಷೇಧ ಹೇರಲು ಆಡಳಿತವು ಚಿಂತನೆ ನಡೆಸಿದೆ.
ಉದ್ವಿಗ್ನತೆಯಿಂದಾಗಿ ಆ ಭಾಗದ ಅಂಗಡಿಕಾರರು ತಕ್ಷಣ ತಮ್ಮ ಅಂಗಡಿಗಳನ್ನು ಮುಚ್ಚಿದರು. ಕೆಲವು ಅಂಗಡಿಗಳ ಮೇಲೂ ದಾಳಿ ನಡೆಸಿ ಧ್ವಂಸಗೊಳಿಸಲಾಗಿದೆ. ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಆಡಳಿತವು ಕ್ರಮ ಕೈಗೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಸಾದ ಮತೆ ಹಾಗೂ ಉಪಾಧೀಕ್ಷಕ ಸಂದೀಪ ಮಿಟಕೆ ಇವರು ತಿಳಿಸಿದ್ದಾರೆ.
Maharashtra: Stone pelting on a procession on the occasion of the birth anniversary of Chhatrapati Sambhaji Maharaj in Shegaon
Situation has been brought under control now. Over 50 people have also been detained.@AruneelS | @MalhotraShivya pic.twitter.com/cr1QVTronK
— TIMES NOW (@TimesNow) May 15, 2023
ಸಂಪಾದಕರ ನಿಲುವುಹಿಂದೂಗಳ ದೇಶದಲ್ಲಿ ಹಲವು ವರ್ಷಗಳಿಂದ ಹಿಂದೂಗಳ ಮೆರವಣಿಗೆಗಳ ಮೇಲೆಯೇ ದಾಳಿ ಮಾಡುವ ಧೈರ್ಯ ಮಾಡಲಾಗುತ್ತಿದೆ. ಈ ಪರಿಸ್ಥಿತಿಯನ್ನು ಬದಲಾಯಿಸಲು ಹಿಂದೂಗಳು ಈಗ ಕಾನೂನಿನ ಮಾರ್ಗದಿಂದ ಮಾಡಬೇಕು. ಇನ್ಮುಂದೆ ಇಂತಹ ಕೃತ್ಯ ಮಾಡಲು ಯಾರಿಗೂ ಧೈರ್ಯ ಮಾಡದಂತೆ ಹಿಂದೂಗಳು ವಾತಾವರಣ ಸೃಷ್ಟಿಸಬೇಕು ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !