ಗುರುದ್ವಾರ ಪ್ರದೇಶದಲ್ಲಿ ಮಹಿಳೆ ಕುಡಿದು ಕುಳಿತಿದ್ದಳು ಎಂದು ಆರೋಪ

ಅಮೃತಸರ (ಪಂಜಾಬ್) – ಮೇ ೧೪ ರಂದು ಪಟಿಯಾಲಾ ಗುರುದ್ವಾರದಲ್ಲಿ ನಿರ್ಮಲಜಿತ್ ಸಿಂಗ್ ಎಂಬ ವ್ಯಕ್ತಿಯೊಬ್ಬ ಮಹಿಳೆಯನ್ನು ಗುಂಡಿಕ್ಕಿ ಕೊಂದಿದ್ದಾನೆ. ‘ಗುರುದ್ವಾರ ದುಖ್ ನಿವರನ್ ಸಾಹಿಬ್’ನ ಪ್ರದೇಶದ ಸರೋವರದ ಬಳಿ ಮಹಿಳೆ ಕುಳಿತು ಮದ್ಯ ಸೇವಿಸುತ್ತಿದ್ದಳು ಎಂದು ಆರೋಪಿಸಲಾಗಿದೆ. ಕೊಲೆಯಾದ ಮಹಿಳೆಯ ಹೆಸರು ಪರ್ವಿಂದರ್ ಕೌರ್ ಆಗಿದೆ. ಈ ಗುಂಡಿನ ದಾಳಿಯಲ್ಲಿ ಒಬ್ಬ ಸೇವಕನೂ ಕೂಡ ಗಾಯಗೊಂಡಿದ್ದಾನೆ. ಹಂತಕ ಸಿಂಗ್ ಪಟಿಯಾಲ ನಿವಾಸಿಯಾಗಿದ್ದು, ಆತನನ್ನು ಬಂಧಿಸಲಾಗಿದೆ.
गुरुद्वारे में शराब पी रही महिला की सेवादार ने गोली मार कर की हत्या, एक अन्य घायल, आरोपी गिरफ्तार #news #dailyhunt https://t.co/J4OsWgCjFY
— Dailyhunt Hindi (@DH_Hindi) May 15, 2023
೩೨ ರ ಹರೆಯದ ಮಹಿಳೆ ಮದ್ಯಪಾನ ಮಾಡುತ್ತಿದ್ದ ಕಾರಣ, ಗುರುದ್ವಾರದ ಸಿಬ್ಬಂದಿ ಕೂಡ ಆಕೆಯನ್ನು ತಡೆಯಲು ಯತ್ನಿಸಿದ್ದಾರೆ. ಅವರು ಮಹಿಳೆಯ ವಿಚಾರಣೆಗಾಗಿ ಗುರುದ್ವಾರದ ವ್ಯವಸ್ಥಾಪಕರ ಕೋಣೆಗೆ ಕರೆದೊಯ್ಯಲು ಪ್ರಯತ್ನಿಸುತ್ತಿದ್ದರು. ಆಗ ಮಹಿಳೆ ಮದ್ಯದ ಬಾಟಲಿಯಿಂದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾಳೆ. ಅದೇ ವೇಳೆಗೆ ಅಲ್ಲಿಗೆ ಬಂದ ನಿರ್ಮಲಜಿತ್ ಸಿಂಗ್ ೫ ಗುಂಡುಗಳನ್ನು ಒಂದರ ಹಿಂದೆ ಒಂದರಂತೆ ಹಾರಿಸಿ ಮಹಿಳೆಯನ್ನು ಕೊಂದಿದ್ದಾನೆ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!