
ಭಾಗ್ಯನಗರ (ತೆಲಂಗಾಣ) – ಭಾಜಪದಿಂದ ಅಮಾನತುಗೊಂಡಿರುವ ಹಿಂದೂತ್ವನಿಷ್ಠ ಶಾಸಕ ಟಿ. ರಾಜಾ ಸಿಂಗ್ರವರ ಅಮಾನತು ಹಿಂಪಡೆಯಲು ಕೇಂದ್ರ ಸಚಿವ ಕಿಶನ್ ರೆಡ್ಡಿಯವರು ಮುಂದಾಗಿದ್ದಾರೆ. ಈ ಬಗ್ಗೆ ಟಿ. ರಾಜಾ ಸಿಂಗ್ರವರು ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರವಾದಿ ಮುಹಮ್ಮದ್ ಅವರನ್ನು ಅವಮಾನಿಸಿದ ಪ್ರಕರಣದಲ್ಲಿ ಆಗಸ್ಟ್ ೨೦೨೨ ರಲ್ಲಿ, ಟಿ. ರಾಜಾ ಸಿಂಗ್ ಅವರನ್ನು ಭಾಜಪವು ೬ ವರ್ಷಗಳ ಕಾಲ ಪಕ್ಷದಿಂದ ಅಮಾನತುಗೊಳಿಸಿತ್ತು.
೧. ಎ.ಬಿ.ಎನ್ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರಿಗೆ ರಾಜಾ ಸಿಂಗ್ ಅವರ ಅಮಾನತಿನ ಕುರಿತು ಪ್ರಶ್ನೆ ಕೇಳಲಾಯಿತು. ಅದಕ್ಕೆ ರೆಡ್ಡಿಯವರು, ನಿಯಮಗಳ ಅಡಿಯಲ್ಲಿ ರಾಜಾ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿತ್ತು ಆ ಅಮಾನತನ್ನು ೧೦೦ ಪ್ರತಿಶತ ಹಿಂಪಡೆಯಲಾಗುವುದು, ಈ ಬಗ್ಗೆ ಕೇಂದ್ರ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಬಗ್ಗೆ ನಾನೂ ಚರ್ಚೆ ಮಾಡುತ್ತಿದ್ದೇನೆ. ಕೇಂದ್ರ ಅಧಿಕಾರಿಗಳಿಗೆ ಎಲ್ಲ ಮಾಹಿತಿ ನೀಡುತ್ತಿದ್ದೇನೆ. ಶೀಘ್ರದಲ್ಲೇ ನಿಗೂಢತೆ ಹೊರಬರಲಿದೆ ಎಂದು ರೆಡ್ಡಿ ಅವರು ಹೇಳಿದ್ದಾರೆ.
೨. ಈ ಬಗ್ಗೆ ಟಿ. ರೆಡ್ಡಿ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ನಾನೂ ಅಮಾನತುಗೊಂಡ ನಂತರವೂ ಭಾಜಪ ಪರ ಕೆಲಸ ಮಾಡುತ್ತಿದ್ದೆ. ಅಮಾನತು ರದ್ದಾದ ನಂತರ ಇನ್ನೂ ಹೆಚ್ಚಿನ ಕೆಲಸವನ್ನು ಮಾಡುತ್ತೇನೆ ಎಂದು ರಾಜಾ ಸಿಂಗ್ ಹೇಳಿದ್ದಾರೆ.
‘We will definitely lift his suspension’: Union Minister G Kishan Reddy says Tiger Raja Singh’s suspension will be revoked at the right timehttps://t.co/Faixh1Kbzs
— OpIndia.com (@OpIndia_com) May 17, 2023
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!