|

ಭೋಪಾಲ (ಮಧ್ಯಪ್ರದೇಶ) – ಮಧ್ಯಪ್ರದೇಶದ ಭಾಜಪ ಸರಕಾರದ ಮಂತ್ರಿ ಮಂಡಳವು ರಾಜ್ಯದಲ್ಲಿರುವ ದೇವಾಲಯಗಳ ಭೂಮಿಯನ್ನು ಜಿಲ್ಲಾಧಿಕಾರಿ ಅಲ್ಲ, ದೇವಾಲಯದ ಅರ್ಚಕರಿಂದ ಹರಾಜು ಮಾಡಬಹುದು ಎಂದು ನಿರ್ಧರಿಸಲಾಗಿದೆ. ಅದೇ ರೀತಿ ಖಾಸಗಿ ದೇವಸ್ಥಾನಗಳ ಅರ್ಚಕರಿಗೂ ಗೌರವಧನ ನೀಡುವುದಾಗಿ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಏಪ್ರಿಲ್ ತಿಂಗಳಲ್ಲಿ ಈ ಬಗ್ಗೆ ಘೋಷಿಸಿದ್ದರು. ತದನಂತರ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.
ಸರಕಾರವು ಕೈಗೊಂಡಿರುವ ನಿರ್ಧಾರದ ಪ್ರಕಾರ ೧೦ ಎಕರೆವರೆಗೆ ಇರುವ ಕೃಷಿ ಭೂಮಿ ಅರ್ಚಕರಿಗೆ ಆದಾಯದ ಮೂಲವಾಗಲಿದೆ. ಇದಲ್ಲದೇ ಜಮೀನು ಹರಾಜು ಮಾಡಲಾಗುವುದು. ಇದರಿಂದ ಬಂದ ಹಣವನ್ನು ದೇವಸ್ಥಾನದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ದೇವಸ್ಥಾನಗಳ ಭೂಮಿಯನ್ನು ಅತಿಕ್ರಮಣ ಮುಕ್ತಗೊಳಿಸಲು ಸರಕಾರ ಈ ನಿರ್ಧಾರ ಕೈಗೊಂಡಿದೆ. ಪ್ರಸ್ತುತ ರಾಜ್ಯದಲ್ಲಿ ಕೃಷಿ ಭೂಮಿ ಇಲ್ಲದ ದೇವಸ್ಥಾನಗಳ ಅರ್ಚಕರಿಗೆ ಸರಕಾರ ತಿಂಗಳಿಗೆ ೫ ಸಾವಿರ ರೂಪಾಯಿ ಗೌರವ ಧನ ನೀಡುತ್ತಿದೆ. ಹಾಗೇಯೆ ಯಾರ ಕಡೆ ೫ ಎಕರೆ ಕೃಷಿಭೂಮಿ ಇದೆಯೋ ಆ ದೇವಸ್ಥಾನಗಳ ಅರ್ಚಕರಿಗೆ ೨೫೦೦ ರೂಪಾಯಿಗಳ ಗೌರವಧನ ನೀಡಲಾಗುವುದು ಎಂದು ಹೇಳಿದರು.
ಸಂಪಾದಕರ ನಿಲುವುಮಧ್ಯಪ್ರದೇಶದ ಭಾಜಪ ಸರಕಾರದ ಶ್ಲಾಘನೀಯ ನಿರ್ಧಾರ ! |
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಕೇಂದ್ರ ಸರಕಾರದಿಂದ ‘ಟೆಂಪಲ್ ಬಾಂಡ್ಸ್’ ಯೋಜನೆ ಜಾರಿ !
ಮೃತರ ಹೆಸರಿನಲ್ಲಿ ಮೊಕದ್ದಮೆ ನಡೆಸಿ ಮಂದಿರ ಆಡಳಿತದ ವಿರುದ್ಧ ಅಚಲಪುರ ತಹಸೀಲ್ದಾರ್ ನೀಡಿದ್ದ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ!
ದೇವಸ್ಥಾನಗಳಲ್ಲಿನ ‘ವಿಐಪಿ ದರ್ಶನ’ದ ಕುರಿತು ಮದ್ರಾಸ್ ಉಚ್ಚ ನ್ಯಾಯಾಲಯದ ತೀವ್ರ ಅಸಮಾಧಾನ