ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಪ್ರಮಾಣವಚನ ಸ್ವೀಕಾರ

ಕಾಂಗ್ರೆಸ್ಸಿನ ಹಿರಿಯ ಮುಖಂಡ ಸಿದ್ಧರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿ ಹುದ್ದೆಯ ಪ್ರಮಾಣವಚನವನ್ನು ಸ್ವೀಕರಿಸುವಾಗ.

ಬೆಂಗಳೂರು – ಕಾಂಗ್ರೆಸ್ಸಿನ ಹಿರಿಯ ಮುಖಂಡ ಸಿದ್ಧರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ. ಶಿವಕುಮಾರ ಇವರು ಉಪಮುಖ್ಯಮಂತ್ರಿ ಹುದ್ದೆಯ ಪ್ರಮಾಣವಚನವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ 8 ಶಾಸಕರಿಗೆ ಕ್ಯಾಬಿನೆಟ ಮಂತ್ರಿ ಹುದ್ದೆಯ ಪ್ರಮಾಣವಚನವನ್ನು ಸ್ವೀಕರಿಸಿದರು. ಪ್ರಮಾಣವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್ಸಿನ ಹಿರಿಯ ಮುಖಂಡ ರಾಹುಲ ಗಾಂಧಿ, ಪ್ರಿಯಾಂಕಾ ಗಾಂಧಿ-ವಾಡ್ರಾ, ಬಿಹಾರ ಮುಖ್ಯಮಂತ್ರಿ ನಿತೀಶ ಕುಮಾರ ಮತ್ತು ಕಾಶ್ಮೀರದ ಪಿ.ಡಿ.ಪಿ. ಪಕ್ಷದ ನಾಯಕಿ ಮೆಹಬೂಬಾ ಮುಫ್ತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಾಹುಲ ಗಾಂಧಿಯವರು, `ಕರ್ನಾಟಕದ ಕಾಂಗ್ರೆಸ್ ಸರಕಾರ ಪಾರದರ್ಶಕ ಮತ್ತು ಸ್ವಚ್ಛ ಆಡಳಿತವನ್ನು ನೀಡುವ ಸರಕಾರವಾಗಲಿದೆ’, ಎಂದು ಭಾಷಣದಲ್ಲಿ ಹೇಳಿದ್ದಾರೆ.