18 ಬೋಗಿಗಳು ಹಳಿ ತಪ್ಪಿ 900 ಪ್ರಯಾಣಿಕರಿಗೆ ಗಾಯ, ೨೩೦ ಜನರ ಸಾವು

ಭುವನೇಶ್ವರ (ಒಡಿಶಾ) – ಇಲ್ಲಿಂದ ಚೆನ್ನೈಗೆ ಹೊರಟಿದ್ದ ಕೋರಮಂಡಲ್ ಎಕ್ಸ್ಪ್ರೆಸ್ ಜೂನ್ 2 ರ ರಾತ್ರಿ ಒಂದು ದೊಡ್ಡ ಅಪಘಾತಕ್ಕೆ ಒಳಗಾಯಿತು. ಸಿಕ್ಕಿರುವ ಮಾಹಿತಿ ಪ್ರಕಾರ ಒಡಿಶಾದ ಬಾಲಸೋರ್ ನಿಂದ ಸುಮಾರು 40 ಕಿ.ಮೀ ದೂರದಲ್ಲಿ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ಡಿಕ್ಕಿಯಾದ ನಂತರ ಎಕ್ಸ್ಪ್ರೆಸ್ನ 3 ಬೋಗಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಬೋಗಿಗಳು ಹಳಿತಪ್ಪಿದವು. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಭೋಗಿಗಳ ಸಂಖ್ಯೆ 18 ಆಗಿದೆ. ಈ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬಲಸಿನೋರ್ ಮತ್ತು ಇತರ ಸುತ್ತಮುತ್ತಲಿನ ಜಿಲ್ಲೆಗಳಿಂದ ವೈದ್ಯಕೀಯ ತಂಡಗಳನ್ನು ಸಹ ಸಹಾಯಕ್ಕಾಗಿ ಕರೆಯಲಾಗಿದೆ.
#WATCH | Morning visuals from the spot where the horrific train accident took place in Odisha’s Balasore district, killing 207 people and injuring 900 pic.twitter.com/yhTAENTNzJ
— ANI (@ANI) June 3, 2023
ಈ ಅಪಘಾತದಲ್ಲಿ ಗಾಯಗೊಂಡ 900 ಕ್ಕೂ ಹೆಚ್ಚು ಪ್ರಯಾಣಿಕರನ್ನು ಇದುವರೆಗೆ ಬೆಹನಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈಲ್ವೆ ಹಳಿಯಲ್ಲಿ ಸಿಗ್ನಲ್ ವೈಫಲ್ಯದಿಂದ ಈ ಅವಘಡ ಸಂಭವಿಸಿದ್ದು, ಎರಡೂ ರೈಲುಗಳು ಒಂದೇ ಹಳಿಯಲ್ಲಿ ಬಂದಿವೆ ಎನ್ನಲಾಗಿದೆ. ಈ ಅಪಘಾತದಲ್ಲಿ ಉಂಟಾದ ಹಾನಿಯ ಬಗ್ಗೆ ಸದ್ಯಕ್ಕೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!