
ಮೈಸೂರು – ಇಲ್ಲಿಯ ಮೈಸೂರು ಮುಕ್ತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ `ಸಾವರಕರ ಪ್ರತಿಷ್ಠಾನ’ ವತಿಯಿಂದ `ವೀರ ಸಾವರಕರ ಪುರಸ್ಕಾರ’ ಸಮಾರಂಭದ ನಿಮಿತ್ತ ಮಕ್ಕಳಿಗೆ ಚಿತ್ರಕಲೆ, ರಕ್ತದಾನ ಶಿಬಿರ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು; ಆದರೆ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳು ಯಾವುದೇ ಕಾರಣವನ್ನು ನೀಡದೇ ಕಾರ್ಯಕ್ರಮದ ಅನುಮತಿಯನ್ನು ರದ್ದುಗೊಳಿಸಿದರು ಮತ್ತು ಸಭಾಂಗಣದ ಪ್ರವೇಶದ್ವಾರಕ್ಕೆ ಬೀಗ ಹಾಕಿದರು. ಇದರಿಂದ ಮಕ್ಕಳು ಪ್ರವೇಶದ್ವಾರದ ಎದುರು ಚಿತ್ರಗಳನ್ನು ಬಿಡಿಸಲು ಪ್ರಾರಂಭಿಸಿದರು. ತದನಂತರ ಭದ್ರತಾದೃಷ್ಟಿಯಿಂದ ಹೆಚ್ಚುವರಿ ಪೊಲೀಸ ಬಂದೋಬಸ್ತ ನಿಯೋಜಿಸಲಾಯಿತು. ಪರಿಸ್ಥಿತಿ ಕೈಮೀರುವ ಸಂಶಯದಿಂದ ವಿಶ್ವವಿದ್ಯಾಲಯದ ಅಧಿಕಾರಿಗಳು ಪ್ರವೇಶದ್ವಾರವನ್ನು ತೆರೆದು ಸಭಾಂಗಣದಲ್ಲಿ ಕಾರ್ಯಕ್ರಮವನ್ನು ನಡೆಸಲು ಅನುಮತಿ ನೀಡಿದರು.
(ಸೌಜನ್ಯ : Tv9 Kannada)
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಭಾಜಪ ಶಾಸಕ ಪ್ರತಾಪ ಸಿಂಹ ಇವರು ಮಾತನಾಡುತ್ತಾ, ಕಾಂಗ್ರೆಸ್ ಸರಕಾರ ಸಾವರಕರರ ಕಾರ್ಯಕ್ರಮವನ್ನು ತಡೆಯಲು ಪ್ರಯತ್ನಿಸಿತು. ಕಾಂಗ್ರೆಸ್ಸಿಗರು ಯಾವಾಗಲೂ ಸಾವರಕರರನ್ನು ವಿರೋಧಿಸುತ್ತಾರೆ. ಕಾಂಗ್ರೆಸ್ ಸರಕಾರ ಪೊಲೀಸ ಬಲದಿಂದ ನಮ್ಮನ್ನು ತುಳಿಯುವ ಕೆಲಸವನ್ನು ಮಾಡುತ್ತಿದೆ; ಆದರೆ ನಾವು ಕಾಂಗ್ರೆಸ್ಸಿನ ಬೆದರಿಕೆಗಳಿಗೆ ಬಗ್ಗುವುದಿಲ್ಲ ಎಂದು ಹೇಳಿದರು.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ