
ಓಟಾವಾ (ಕೆನಡಾ) – ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹಸ್ತಕ್ಷೇಪದ ನಂತರ ಕೆನಡಾ ಸರಕಾರವು ಭಾರತೀಯ ವಿದ್ಯಾರ್ಥಿಗಳ ಗಡಿಪಾರು ಮಾಡುವುದನ್ನು ಸ್ತಗಿತಗೊಳಿಸಿದೆ. ಇದಕ್ಕೂ ಮೊದಲು ಕೆನಡಾ ಸರಕಾರವು ಭಾರತೀಯ ವಿದ್ಯಾರ್ಥಿ ಲವ್ಪ್ರೀತ್ ಸಿಂಗ್ಗೆ ಜೂನ್ ೧೩ ರೊಳಗೆ ದೇಶವನ್ನು ತೊರೆಯುವಂತೆ ಆದೇಶಿಸಿತ್ತು. ಈ ಆದೇಶದ ನಂತರ ಭಾರತೀಯ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದರು.
ಭಾರತೀಯ ವಿದ್ಯಾರ್ಥಿಗಳನ್ನು ಗಡಿಪಾರು ಮಾಡುವ ನಿರ್ಧಾರದ ಮೇಲೆ ಕೆನಡಾದ ಸಂಸತ್ತಿನಲ್ಲಿ ಮತದಾನ ನಡೆಯಿತು. ಈ ಮತದಾನದಲ್ಲಿ ಭಾರತೀಯ ವಿದ್ಯಾರ್ಥಿಗಳ ಪರವಾಗಿ ಫಲಿತಾಂಶ ಬಂದಿದೆ. ಕೆನಡಾದ ಸಂಸದ ಜೆನಿ ಕೊವಾನ್ ಇವರು, ಭಾರತೀಯ ವಿದ್ಯಾರ್ಥಿಗಳು ವಂಚನೆಗೆ ಬಲಿಯಾಗಿದ್ದಾರೆ ಹಾಗಾಗಿ ಅವರಿಗೆ ಶಿಕ್ಷೆಯಾಗಬಾರದು. ಇದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ದೇಶ ತೊರೆಯುವಂತೆ ಆದೇಶಿಸಲಾಗಿದೆ. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಭಾರತೀಯ ವಿದ್ಯಾರ್ಥಿಗಳಿಗೆ ಸಾಧ್ಯವಿರುವಷ್ಟು ಎಲ್ಲ ಸಹಾಯವನ್ನು ನೀಡುವಂತೆ ಸೂಚಿಸಿದ್ದರು ಎಂದು ಹೇಳಿದರು.
Will provide appropriate remedy for Indian students facing deportation: Canadian Minister https://t.co/bTBvgHg9nM
— OTV (@otvnews) June 13, 2023
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!
‘ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತ ತನ್ನ ಜನರ ಸಮಸ್ಯೆಗಳತ್ತ ಗಮನ ಹರಿಸುತ್ತದೆ ಎಂದು ಭಾವಿಸುತ್ತೇವೆ!’
ನ್ಯೂಯಾರ್ಕ್ (ಅಮೇರಿಕ): ಏಷ್ಯನ್ ಮೂಲದ ವ್ಯಕ್ತಿಗಳ ಮೇಲೆ ಚಾಕು ದಾಳಿ!
ಸಿಲಿಗುರಿ ಕಾರಿಡಾರ್ ಈಗ ‘ಚಿಕನ್ ನೆಕ್’ ಆಗಿ ಉಳಿದಿಲ್ಲ, ಬದಲಿಗೆ ‘ಎಲಿಫೆಂಟ್ಸ್ ಟ್ರಂಕ್’ ಆಗಿದೆ!
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India
ನಾಗರಿಕ ಅಣು ಒಪ್ಪಂದಕ್ಕಾಗಿ ಸೌದಿ ಅರೇಬಿಯಾ ಇಸ್ರೇಲ್ ಅನ್ನು ಒಪ್ಪಿಗೆ ನೀಡಬೇಕು ! : Recognize Israel