ಮಾನ್ಯತೆ ಪಡೆದ ಧಾರ್ಮಿಕ ಸಂಘಟನೆಗಳಿಂದಲೂ ೩೦ ದಿನಗಳಲ್ಲಿ ಅಭಿಪ್ರಾಯ ತಿಳಿಸಲು ಕರೆ

ನವ ದೆಹಲಿ – ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಬಗ್ಗೆ ಹಿಂದೂಗಳ ಕಳೆದ ಅನೇಕ ವರ್ಷಗಳ ಒತ್ತಾಯವು ಈಗ ಮುನ್ನೆಲೆಗೆ ಬಂದಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ಮಾಜಿ ನ್ಯಾಯಮೂರ್ತಿ ಋತುರಾಜ ಅವಸ್ಥಿ ಇವರ ಅಧ್ಯಕ್ಷತೆಯಲ್ಲಿ ದೇಶದ ೨೨ ನೇಯ ಕಾನೂನು ಆಯೋಗದಿಂದ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಜನರಿಂದ ಅಭಿಪ್ರಾಯ ಕೇಳಿದೆ. ಇದರ ಜೊತೆಗೆ ಆಯೋಗವು ಮಾನ್ಯತೆ ಪಡೆದ ಧಾರ್ಮಿಕ ಸಂಘಟನೆಗಳಿಂದ ಕೂಡ ಅದರ ಅಭಿಪ್ರಾಯ ಕಳಿಸಲು ಕರೆ ನೀಡಿದೆ. ನಾಗರೀಕ ಮತ್ತು ಧಾರ್ಮಿಕ ಸಂಘಟನೆಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ೩೦ ದಿನದೊಳಗೆ ಕಳುಹಿಸುವುದು ಅವಶ್ಯಕವಾಗಿದೆ.
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಸಾರ್ವಜನಿಕರ ಅಭಿಪ್ರಾಯ ಕೇಳಲು ಮುಂದಾದ ಕಾನೂನು ಆಯೋಗ#UniformCivilCode #PublicOpinion #LAW https://t.co/zZY1XEghMB
— TV9 Kannada (@tv9kannada) June 14, 2023
ಈ ಹಿಂದೆ ಅಂದರೆ ೨೧ ನೇಯ ಕಾನೂನು ಆಯೋಗ ಕೂಡ ಮೂರು ವರ್ಷಗಳ ಹಿಂದೆ ಏಕರೂಪ ನಾಗರಿಕ ಸಂಹಿತೆಯ ವಿಷಯದ ಬಗ್ಗೆ ಅಧ್ಯಯನ ನಡೆಸಿತ್ತು. ಅದರ ನಂತರ ಕೇಂದ್ರೀಯ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯಕ್ಕೆ ಕಳುಹಿಸಿದ ಪತ್ರದ ನಂತರ ಪ್ರಸ್ತುತ ಕಾನೂನು ಆಯೋಗದಿಂದ ಈ ವಿಷಯದ ಪ್ರಕ್ರಿಯೆ ಆರಂಭವಾಯಿತು.
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾದರೆ ಎಲ್ಲಾ ನಾಗರಿಕರಿಗಾಗಿ ವಿವಾಹ, ವಿಚ್ಛೇದನ, ದತ್ತು ಪಡೆಯುವುದು, ಪಿತ್ರಾರ್ಜಿತ ಆಸ್ತಿ ಮತ್ತು ಉತ್ತರಾಧಿಕಾರ ಇಂತಹ ವೈಯಕ್ತಿಕ ಪ್ರಕರಣಗಳಲ್ಲಿ ಸಮಾನ ನ್ಯಾಯ ದೊರೆಯುವುದು.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!