ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವಕ್ಕಾಗಿ ಕರ್ನಾಟಕದ `ಪೇಜಾವರ ಮಠ’ದ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ಶುಭಸಂದೇಶ

`ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ (ವೈಶ್ವಿಕ್ ಹಿಂದೂ ರಾಷ್ಟ್ರ ಮಹೋತ್ಸವದ) ಆಯೋಜನೆಯು ಅತ್ಯಂತ ಆವಶ್ಯಕತೆಯ ವಿಷಯವಾಗಿದೆ. ವಿಶ್ವದಲ್ಲಿ ಹಿಂದೂಗಳಿಗಾಗಿ ಕೇವಲ ಭಾರತವೊಂದೇ ದೇಶ ಇದೆ. ಈ ವಿಶ್ವದಲ್ಲಿ ಮತ್ತು ಸಮಾಜದಲ್ಲಿ ಹಿಂದೂಗಳಿಗೆ ಗೌರವದಿಂದ ಬದುಕಬೇಕಾಗಿದ್ದರೆ, ಈ ಜಾಗೃತಿಯು ಅತ್ಯಂತ ಆವಶ್ಯಕವಾಗಿದೆ. ಆದ್ದರಿಂದ ಎಲ್ಲ ಸಮಾನ ವಿಚಾರಧಾರೆಯ ಸಂಸ್ಥೆಗಳು ಅಥವಾ ಸಂಘಟನೆಗಳು ಒಂದೆಡೆ ಸೇರಿ ಚಿಂತನ, ಮಂಥನವನ್ನು ಮಾಡಬೇಕು. ಹಿಂದೂಜಾಗೃತಿಯ ಕಾರ್ಯವನ್ನು ಮುಂದಕ್ಕೆ ಕೊಂಡೊಯ್ಯಲು ಯಾವ ಯಾವ ಕ್ರಮಗಳನ್ನು ಕೈಕೊಳ್ಳಬಹುದು ಎಂದು ನಿರ್ಣಯಿಸುವುದು ಅತ್ಯಂತ ಆವಶ್ಯಕವಾಗಿದೆ. ಆದ್ದರಿಂದ ಈ ಅಧಿವೇಶನ ಅತ್ಯಂತ ಯೋಗ್ಯವಾಗಿದೆ. ಈ ಅಧಿವೇಶನವು ನಿಃಸಂಶಯವಾಗಿ ಉತ್ತರೋತ್ತರ ಅಭಿವೃದ್ಧಿ ಹೊಂದಬೇಕು ಎಂದು ನಾವು ಭಗವಾನ ಶ್ರೀಕೃಷ್ಣನ ಚರಣಗಳಲ್ಲಿ ಪ್ರಾರ್ಥಿಸೋಣ.
ಯತ್ರ ಯೋಗೇಶ್ವರಃ ಕೃಷ್ಣೋ ಯತ್ರ ಪಾರ್ಥೋ ಧನುರ್ಧರಃ|
ತತ್ರ ಶ್ರೀರ್ವಿಜಯೋ ಭೂತಿರ್ಧುವಾ ನೀತಿರ್ಮತಿರ್ಮಮ||
ಶ್ರೀ ಕೃಷ್ಣಾರ್ಪಣಮಸ್ತು
– ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಪೇಜಾವರ ಮಠ, ಕರ್ನಾಟಕ (ಜೂನ 2023)
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara