ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದಲ್ಲಿ ಪ್ರಖರ ಹಿಂದುತ್ವನಿಷ್ಠ ಶಾಸಕ ಟಿ. ರಾಜಾ ಸಿಂಗ್ ಅವರಿಂದ ‘ಹಿಂದೂ ರಾಷ್ಟ್ರ’ ಸ್ಥಾಪನೆಯ ಘೋಷಣೆ!

ರಾಮನಾಥಿ, ಜೂ.22 (ವಾರ್ತೆ) – ರಾಜಕೀಯ ಎಂದರೆ ಜನರು ಆಯ್ಕೆ ಮಾಡುವವರೆಗೆ ಮಾತ್ರ. ನನಗೆ ಹಿಂದುತ್ವಕ್ಕಾಗಿ ಬದುಕುವುದಿದೆ. ಧರ್ಮಕ್ಕಾಗಿ ರಾಜಕೀಯ ಬಿಡಲು ಸಿದ್ಧನಿದ್ದೇನೆ. ಇವತ್ತೋ ನಾಳೆಯೋ ಸಾವು ಖಚಿತ ಎಂದಾದರೆ ಇತಿಹಾಸದಲ್ಲಿ ದಾಖಲಾಗುವ ಹಾಗೆ ಸಾಯಬಾರದೇಕೆ ? ದೇಶ ಮತ್ತು ಧರ್ಮಕ್ಕಾಗಿ ಸಾಯಲೂ ಸಿದ್ಧನಿದ್ದೇನೆ. ಹಿಂದೂಗಳು ಹೆದರಬಾರದು. ಹಿಂದೂ ರಾಷ್ಟ್ರ ಸ್ಥಾಪನೆಯ ಸಂಕಲ್ಪವನ್ನು ಈಡೇರಿಸಲು ನಾವು ಹುಟ್ಟಿದ್ದೇವೆ ಎಂದು ಭಾಗ್ಯನಗರದ ಪ್ರಖರ ಹಿಂದುತ್ವನಿಷ್ಠ ಶಾಸಕ ಟಿ. ರಾಜಾಸಿಂಗ್ ಇವರು ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ವೇದಿಕೆಯ ಗರ್ಜಿಸಿದರು. ಈ ಸಂದರ್ಭದಲ್ಲಿ ಪ್ರಖರ ಹಿಂದುತ್ವನಿಷ್ಠ ಪತ್ರಿಕೆಯಾದ ‘ಸನಾತನ ಪ್ರಭಾತ’ನ ದೈನಿಕದ ಸಹ ಸಂಪಾದಕರಾದ ಶ್ರೀ. ಸಂದೀಪ ಶಿಂದೆ, ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶ್ರೀ. ಮುನ್ನಾ ಕುಮಾರ ಶರ್ಮಾ (ನವದೆಹಲಿ), ಹಿಂದೂ ಜನಜಾಗೃತಿ ಸಮಿತಿಯ ಧರ್ಮಪ್ರಚಾರಕ ಸದ್ಗುರು ನೀಲೇಶ ಸಿಂಗಬಾಳ ಇವರು ಉಪಸ್ಥಿತರಿದ್ದರು.
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers