
ಹಿಂದೂ ರಾಷ್ಟ್ರ ಅಧಿವೇಶನವು ಯಾವಾಗಲೂ ‘ದೇವಾಲಯ ಮುಕ್ತಿ ಮತ್ತು ದೇವಾಲಯ ರಕ್ಷಣೆಯ ನಿಲುವಿಗೆ ಬದ್ಧವಾಗಿದೆ. ಈ ಅಧಿವೇಶನದಿಂದ ಅನೇಕ ದೇವಾಲಯ ಚಳುವಳಿಗಳು ಆರಂಭಗೊಂಡಿತು. ಉದಾ. ಮಧ್ಯಪ್ರದೇಶದಲ್ಲಿ ಭೋಜಶಾಲಾ ಮುಕ್ತಿ ಆಂದೋಲನ, ತಿರುಪತಿ ಬಾಲಾಜಿಯಲ್ಲಿ ಅಕ್ರಮ ಇಸ್ಲಾಮಿಕ್ ಅತಿಕ್ರಮಣ ತೆರವು; ಪಂಢರಾಪುರ, ಶಿರ್ಡಿ, ಕೊಲ್ಲಾಪುರ, ತುಳಜಾಪುರಗಳಲ್ಲಿನ ಸರಕಾರ ಸ್ವಾಧೀನ ಪಡಿಸಿರುವ ದೇವಾಲಯಗಳಲ್ಲಿನ ಭ್ರಷ್ಟಾಚಾರದ ವಿರುದ್ಧದ ಹೋರಾಟ ಇವು ಪ್ರಮುಖ ಚಳುವಳಿಗಳಾಗಿವೆ. ‘ಗೋಮಾಂತಕ ಮಂದಿರ ಮಹಾಸಂಘವು ಗೋವಾದಲ್ಲಿ ದೇವಾಲಯ ಸಂಸ್ಕೃತಿಯನ್ನು ಉಳಿಸಲು ಮತ್ತು ಉತ್ತೇಜಿಸಲು ಕಾರ್ಯ ಮಾಡುತ್ತಿದ್ದರೆ, ಮಹಾರಾಷ್ಟ್ರದಲ್ಲಿ ‘ಮಹಾರಾಷ್ಟ್ರ ಮಂದಿರ ಮಹಾಸಂಘ ಕಾರ್ಯನಿರ್ವಹಿಸುತ್ತಿದೆ. ಮಹಾರಾಷ್ಟ್ರದಲ್ಲಿ ನಾವು ೧೩೧ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಿದ್ದೇವೆ. ಮಹಾರಾಷ್ಟ್ರದಂತೆ ಕರ್ನಾಟಕ, ದೆಹಲಿಗಳಲ್ಲಿ ದೇವಸ್ಥಾನಗಳ ಟ್ರಸ್ಟಿಗಳ ಸಭೆಯನ್ನು ಶೀಘ್ರದಲ್ಲೇ ಆಯೋಜಿಸುವುದಾಗಿ ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ನಿಮಿತ್ತ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶ್ರೀ. ಘನವಟರು ತಿಳಿಸಿದ್ದಾರೆ.
ದೇವಸ್ಥಾನ ಇನಾಮು ಭೂಮಿಗಳ ಕುರಿತಾದ ಕರಡು ಸಿದ್ಧಪಡಿಸುವ ಸಮಿತಿಯಲ್ಲಿ ದೇವಸ್ಥಾನಗಳ ಪ್ರತಿನಿಧಿಗಳ ಸೇರ್ಪಡೆ!
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ವಿವಾದಾತ್ಮಕ ‘ಈಠ್ಠಲಾ’ ನಾಟಕದಲ್ಲಿರುವ ಸಂತರ ಹೆಸರುಗಳು ಮತ್ತು ಆಕ್ಷೇಪಾರ್ಹ ಭಾಗಗಳನ್ನು ಕೈಬಿಡಿ!
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ಮಹಾರಾಷ್ಟ್ರ ರಾಜ್ಯದ ಕಂದಾಯ ಸಚಿವ ಬಾವನಕುಳೆ ಅವರೊಂದಿಗೆ ಮಹಾರಾಷ್ಟ್ರ ಮಂದಿರ ಮಹಾಸಂಘದ ನಿಯೋಗದ ಸಭೆ !