
ತಿರುಪತಿ (ಆಂಧ್ರಪ್ರದೇಶ) – ಇಲ್ಲಿಯ ತಿರುಪತಿ ದೇವಸ್ಥಾನದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ಓರ್ವ ಆಧ್ಯಾತ್ಮಿಕ ಉತ್ತರಾಧಿಕಾರಿ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಇವರು ೩ ಜುಲೈ ೨೦೨೩ ರಂದು ಅಂದರೆ ಗುರುಪೂರ್ಣಿಮೆಯ ದಿನದಂದು ಶ್ರೀ ಬಾಲಾಜಿಯ ದರ್ಶನ ಪಡೆದು ಕೃತಜ್ಞತಾಪುಷ್ಪ ಅರ್ಪಿಸಿದರು. ೧೧ ಮೇ ೨೦೨೩ ರಂದು ಸಪ್ತರ್ಷಿಗಳ ಆಜ್ಞೆಯಂತೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ‘ಬ್ರಹ್ಮೋತ್ಸವ ನಡೆಯಿತು. ಅನಂತರ ನಡೆದ ನಾಡಿಪಟ್ಟಿ ವಾಚನದಲ್ಲಿ ಸಪ್ತರ್ಷಿಗಳು ಮುಂದಿನಂತೆ ಹೇಳಿದರು, “ಗುರುಪೂರ್ಣಿಮೆಯ ದಿನದಂದು ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ತಿರುಪತಿಗೆ ಹೋಗಿ ಬ್ರಹ್ಮೋತ್ಸವ ನಿರ್ವಿಘ್ನವಾಗಿ ನಡೆದಿರುವುದರಿಂದ ಕೃತಜ್ಞತೆ ವ್ಯಕ್ತಪಡಿಸಬೇಕು, ಎಂದಿದ್ದರು. ಅದಕ್ಕನುಸಾರ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಗುರುಪೂರ್ಣಿಮೆಯ ದಿನದಂದು ಮಧ್ಯಾಹ್ನ ೪ ಗಂಟೆಗೆ ತಿರುಪತಿಗೆ ಹೋಗಿ ಶ್ರೀ ಬಾಲಾಜಿಯ ದರ್ಶನ ಪಡೆದು ಕೃತಜ್ಞತೆ ವ್ಯಕ್ತಪಡಿಸಿದರು.
ಆ ಸಮಯದಲ್ಲಿ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ದೀರ್ಘಾಯುಷ್ಯಕ್ಕಾಗಿ, ಎಲ್ಲಾ ಸಾಧಕರ ಆರೋಗ್ಯಕ್ಕಾಗಿ ಮತ್ತು ಸಾಧಕರ ಸುತ್ತಲೂ ರಕ್ಷಣಾ ಕವಚ ನಿರ್ಮಾಣವಾಗುವುದಕ್ಕಾಗಿ ಹಾಗೂ ಹಿಂದೂ ರಾಷ್ಟ್ರ ಸ್ಥಾಪನೆಯಲ್ಲಿನ ಸೂಕ್ಷ್ಮದಲ್ಲಿನ ತೊಂದರೆಗಳು ದೂರವಾಗುವುದಕ್ಕಾಗಿ ಶ್ರೀ ಬಾಲಾಜಿಯ ಚರಣಗಳಲ್ಲಿ ಪ್ರಾರ್ಥನೆ ಮಾಡಿದರು.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಕೇಂದ್ರ ಸರಕಾರದಿಂದ ‘ಟೆಂಪಲ್ ಬಾಂಡ್ಸ್’ ಯೋಜನೆ ಜಾರಿ !
ದೇವಸ್ಥಾನಗಳಲ್ಲಿನ ‘ವಿಐಪಿ ದರ್ಶನ’ದ ಕುರಿತು ಮದ್ರಾಸ್ ಉಚ್ಚ ನ್ಯಾಯಾಲಯದ ತೀವ್ರ ಅಸಮಾಧಾನ
ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಭದ್ರತೆಯ ಯಾವುದೇ ಲೋಪವಿಲ್ಲ, ಆಭರಣಗಳೂ ಸುರಕ್ಷಿತವಾಗಿವೆ! – ದೇವಸ್ಥಾನದ ಆಡಳಿತ ಮಂಡಳಿಯ ಸ್ಪಷ್ಟೀಕರಣ : Padmanabhaswamy Temple
ಕೇರಳಮ್ನ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳು ನಾಪತ್ತೆ ! : Temple Gold Theft