
ತಿರುಪತಿ (ಆಂಧ್ರಪ್ರದೇಶ) – ಇಲ್ಲಿಯ ತಿರುಪತಿ ದೇವಸ್ಥಾನದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ಓರ್ವ ಆಧ್ಯಾತ್ಮಿಕ ಉತ್ತರಾಧಿಕಾರಿ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಇವರು ೩ ಜುಲೈ ೨೦೨೩ ರಂದು ಅಂದರೆ ಗುರುಪೂರ್ಣಿಮೆಯ ದಿನದಂದು ಶ್ರೀ ಬಾಲಾಜಿಯ ದರ್ಶನ ಪಡೆದು ಕೃತಜ್ಞತಾಪುಷ್ಪ ಅರ್ಪಿಸಿದರು. ೧೧ ಮೇ ೨೦೨೩ ರಂದು ಸಪ್ತರ್ಷಿಗಳ ಆಜ್ಞೆಯಂತೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ‘ಬ್ರಹ್ಮೋತ್ಸವ ನಡೆಯಿತು. ಅನಂತರ ನಡೆದ ನಾಡಿಪಟ್ಟಿ ವಾಚನದಲ್ಲಿ ಸಪ್ತರ್ಷಿಗಳು ಮುಂದಿನಂತೆ ಹೇಳಿದರು, “ಗುರುಪೂರ್ಣಿಮೆಯ ದಿನದಂದು ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ತಿರುಪತಿಗೆ ಹೋಗಿ ಬ್ರಹ್ಮೋತ್ಸವ ನಿರ್ವಿಘ್ನವಾಗಿ ನಡೆದಿರುವುದರಿಂದ ಕೃತಜ್ಞತೆ ವ್ಯಕ್ತಪಡಿಸಬೇಕು, ಎಂದಿದ್ದರು. ಅದಕ್ಕನುಸಾರ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಗುರುಪೂರ್ಣಿಮೆಯ ದಿನದಂದು ಮಧ್ಯಾಹ್ನ ೪ ಗಂಟೆಗೆ ತಿರುಪತಿಗೆ ಹೋಗಿ ಶ್ರೀ ಬಾಲಾಜಿಯ ದರ್ಶನ ಪಡೆದು ಕೃತಜ್ಞತೆ ವ್ಯಕ್ತಪಡಿಸಿದರು.
ಆ ಸಮಯದಲ್ಲಿ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ದೀರ್ಘಾಯುಷ್ಯಕ್ಕಾಗಿ, ಎಲ್ಲಾ ಸಾಧಕರ ಆರೋಗ್ಯಕ್ಕಾಗಿ ಮತ್ತು ಸಾಧಕರ ಸುತ್ತಲೂ ರಕ್ಷಣಾ ಕವಚ ನಿರ್ಮಾಣವಾಗುವುದಕ್ಕಾಗಿ ಹಾಗೂ ಹಿಂದೂ ರಾಷ್ಟ್ರ ಸ್ಥಾಪನೆಯಲ್ಲಿನ ಸೂಕ್ಷ್ಮದಲ್ಲಿನ ತೊಂದರೆಗಳು ದೂರವಾಗುವುದಕ್ಕಾಗಿ ಶ್ರೀ ಬಾಲಾಜಿಯ ಚರಣಗಳಲ್ಲಿ ಪ್ರಾರ್ಥನೆ ಮಾಡಿದರು.
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಭಾರತವು ಹಿಂದೂ ರಾಷ್ಟ್ರವೇ ಆಗಿದೆ! : Union Minister Pralhad Joshi
ದೇವಸ್ಥಾನಗಳ ಹಣದಿಂದ ನಿರ್ಮಿಸಲಾಗುತ್ತಿದ್ದ ವಾಣಿಜ್ಯ ಸಂಕೀರ್ಣಗಳ ಯೋಜನೆಗಳು ರದ್ದು !
ಶ್ರೀ ಮಹಾಲಕ್ಷ್ಮೀದೇವಿ ಮಂದಿರ ಅಭಿವೃದ್ಧಿ ಯೋಜನೆಯ ಚಾಲನೆ
ದೇವಸ್ಥಾನ ಇನಾಮು ಭೂಮಿಗಳ ಕುರಿತಾದ ಕರಡು ಸಿದ್ಧಪಡಿಸುವ ಸಮಿತಿಯಲ್ಲಿ ದೇವಸ್ಥಾನಗಳ ಪ್ರತಿನಿಧಿಗಳ ಸೇರ್ಪಡೆ!